ಹಿರಿಯೂರು :
ನಗರದ ಗಿರೀಶ ಪ್ರೌಢಶಾಲೆ ಆವರಣದಲ್ಲಿ ಇದೇ ಜನವರಿ 4ರ ಗುರುವಾರ ಬೆಳಿಗ್ಗೆ 10ಗಂಟೆಗೆ ಭಾರತ ಸೇವಾದಳ ಶತಮಾನೋತ್ಸವದ ಅಂಗವಾಗಿ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ” ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಕ್ಷೇತ್ರಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ನಗರದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ ಪ್ರತಿಶಾಲೆಗೆ ಇಬ್ಬರು ಮಕ್ಕಳು ಹಾಗೂ ಶಿಕ್ಷಕರು ಸೇವಾದಳದ ಸಮವಸ್ತ್ರವನ್ನು ಧರಿಸಿ, ಕಡ್ಡಾಯವಾಗಿ ಭಾಗವಹಿಸಬೇಕು ಎಂಬುದಾಗಿ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಪ್ರಧಾನ ರಸ್ತೆ ಮೂಲಕ ಮಕ್ಕಳ ಜಾತ ಮೆರವಣಿಗೆ ಹೊರಟು ಗಾಂಧಿ ಸರ್ಕಲ್ ನಿಂದ ದುರ್ಗಮ್ಮ ದೇವಸ್ಥಾನದ ನಂತರ ತೇರುಮಲ್ಲೇಶ್ವರ ಬೀದಿಯಿಂದ ಬಿಇಓ ಕಛೇರಿ ಮೂಲಕ ಗುರುಭವನದಲ್ಲಿ ಮೆರವಣಿಗೆ ಮುಕ್ತಾಯಗೊಂಡು ನಂತರ ಮಧ್ಯಾಹ್ನ 1 ಗಂಟೆಗೆ ಮಕ್ಕಳ ಮೇಳ ಪ್ರಾರಂಭವಾಗಲಿದೆ ಎಂಬುದಾಗಿ ಅವರು ಮಾಹಿತಿ ನೀಡಿದ್ದಾರೆ.
ಈ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಉದ್ಘಾಟನೆ ನೆರವೇರಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸೇವಾದಳದ ಅಧ್ಯಕ್ಷರಾದ ಎಂ,ಪಿ,ತಿಪ್ಪೇಸ್ವಾಮಿ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಸಿ,ಎಂ,ತಿಪ್ಪೇಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕ ಮನೋಹರ್, ಜಿಲ್ಲಾ ವಲಯ ಸಂಘಟಕ ಅಣ್ಣಯ್ಯ, ಜಿಲ್ಲಾ ಉಪಾಧ್ಯಕ್ಷ ಮಲಕಪ್ಪ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಪ್ರೌಢಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷ ಅಶೋಕ, ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಅನುದಾನಿತ ಪ್ರೌಢಶಾಲೆ ಸಂಘದ ಕಾರ್ಯದರ್ಶಿ ಮಂಜುನಾಥ್, ಶ್ರೀಲೋಕಮ್ಮ, ರಾಜಪ್ಪ, ರಮೇಶ್, ಶ್ರೀಧರ್, ರಮೇಶ್ ನಾಯ್ಕ, ಮೋಕ್ಷನಾಥಯ್ಯ, ಹಾಗೂ ಯತೀಶ್ ರವರು ಭಾಗವಹಿಸಲಿದ್ದಾರೆ.
ಈ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ” ಮೇಳ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ಮಕ್ಕಳು, ಶಿಕ್ಷಕ-ಶಿಕ್ಷಕಿಯರು, ವಿವಿಧ ಸಂಘಸಂಸ್ಥೆಗಳ ಮುಖಂಡರು, ನಗರದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಕಾರ್ಯಕ್ರಮದ ಸಂಘಟಕರು ಮನವಿ ಮಾಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments