ಹಿರಿಯೂರು :
ನಗರದ ದುರ್ಗಿಗುಡಿ ಬೀದಿಯಲ್ಲಿರುವ ಶ್ರೀವಿಠ್ಠಲರುಕ್ಮಿಣಿ ದೇವಾಲಯದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇದೇ ಫೆಬ್ರವರಿ 10 ಮತ್ತು 11 ರಂದು 17ನೇ ವರ್ಷದ ದಿಂಡಿ ಉತ್ಸವ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ಬಿ.ಕೆ.ಮಂಜುನಾಥ್ ರಾವ್ ಬೇದ್ರೆ ತಿಳಿಸಿದ್ದಾರೆ.
ಇದರ ಅಂಗವಾಗಿ 10ರಂದು ಅಭಿಷೇಕ ಮಹಾಮಂಗಳಾರತಿ ಹಾಗೂ ಭಜನೆ ಕಾರ್ಯಕ್ರಮ ಇರುತ್ತದೆ. 12 ಗಂಟೆಯಿಂದ ಕಲ್ಯಾಣೋತ್ಸವ ಸಂಜೆ 4ಗಂಟೆಯಿಂದ ಪ್ರತಿಷ್ಠಾಪನೆ ಪ್ರವಚನ ಕಾರ್ಯಕ್ರಮಗಳು ನಡೆಯಲಿವೆ. 11ರ ಭಾನುವಾರ ಬೆಳಿಗ್ಗೆ 5:30ಕ್ಕೆಕಾಕಡಾರತಿ ನಂತರ ಶ್ರೀ ಜ್ಞಾನೇಶ್ವರಿ ಪಾರಾಯಣ 9ಗಂಟೆಯಿಂದ ವಿಠ್ಠಲ ರುಕ್ಮಿಣಿ ದೇವರ ಉತ್ಸವ ಮೂರ್ತಿಗಳ ಅಲಂಕೃತ ಭವ್ಯ ರಥದಲ್ಲಿ ರಾಜ ಬೀದಿ ಉತ್ಸವ ಏರ್ಪಡಿಸಲಾಗಿದೆ.
ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಇರುತ್ತದೆ .ಭಾವಸಾರ ಕ್ಷತ್ರಿಯ ಸಮಾಜ ಬಾಂಧವರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಭಾವಸಾರ ಕ್ಷತ್ರಿಯ ಸಮಾಜದ ಮುಂಖಡರು ಮನವಿ ಸಲ್ಲಿಸಿದರು.
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments