ಹಿರಿಯೂರು :
ನಗರದ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ಮತ್ತು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಮುಂಭಾಗದ ಪ್ರಧಾನರಸ್ತೆಯಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ರಾಮಕೃಷ್ಣಪ್ಪ ಹಾಗೂ ನಗರ ಘಟಕದ ಅಧ್ಯಕ್ಷ ಮೊಹಮ್ಮದ್ ಜಾಕೀರ್ ನೇತೃತ್ವದಲ್ಲಿ ಭಾನುವಾರ ಅನಾವರಣಗೊಳಿಸಲಾಯಿತು.
ಕುವೆಂಪು ಹಾಗೂ ಪುನೀತ್ ಕರ್ನಾಟಕದ ಹೆಮ್ಮೆಯ ಚೇತನಗಳು ಅವರ ಪುತ್ಥಳಿ ಪ್ರತಿಮೆಗಳ ಸ್ಥಾಪನೆ ನಾಡಿಗೆ ಹೆಮ್ಮೆಯ ಸಂಗತಿ, ಅಧಿಕಾರಿಗಳು ಇವುಗಳನ್ನು ತೆರವುಗೊಳಿಸಲು ಮುಂದಾದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂಬುದಾಗಿ ಕರವೇ ಮುಖಂಡರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ತಿಮ್ಮರಾಜು, ತಾಲ್ಲೂಕು ಗೌರವಾಧ್ಯಕ್ಷ ಗೋ.ಬಸವರಾಜ್, ಡಿಕೆಎಸ್ ದಾದಾಪೀರ್, ಎಂ.ಕೆ.ಜಾಫರ್, ಮೊಹಮ್ಮದ್ ಸುಹೇಲ್, ಖಲಂದರ್, ರವಿ, ಮಂಜುನಾಥ್, ದೊಡ್ಮನೆ ಅಭಿಮಾನಿಗಳ ಬಳಗ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಹಾಜರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments