ನಗರದ ಇಂದಿರಾ ಕ್ಯಾಂಟೀನ್ ಮುಂಭಾಗದಲ್ಲಿ ನಟ ಪುನೀತ್ ರಾಜಕುಮಾರ್ ರವರ ಪ್ರತಿಮೆಅನಾವರಣ

by | 25/10/23 | ಸುದ್ದಿ


ಹಿರಿಯೂರು :
ನಗರದ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ಮತ್ತು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಮುಂಭಾಗದ ಪ್ರಧಾನರಸ್ತೆಯಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ರಾಮಕೃಷ್ಣಪ್ಪ ಹಾಗೂ ನಗರ ಘಟಕದ ಅಧ್ಯಕ್ಷ ಮೊಹಮ್ಮದ್ ಜಾಕೀರ್ ನೇತೃತ್ವದಲ್ಲಿ ಭಾನುವಾರ ಅನಾವರಣಗೊಳಿಸಲಾಯಿತು.
ಕುವೆಂಪು ಹಾಗೂ ಪುನೀತ್ ಕರ್ನಾಟಕದ ಹೆಮ್ಮೆಯ ಚೇತನಗಳು ಅವರ ಪುತ್ಥಳಿ ಪ್ರತಿಮೆಗಳ ಸ್ಥಾಪನೆ ನಾಡಿಗೆ ಹೆಮ್ಮೆಯ ಸಂಗತಿ, ಅಧಿಕಾರಿಗಳು ಇವುಗಳನ್ನು ತೆರವುಗೊಳಿಸಲು ಮುಂದಾದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂಬುದಾಗಿ ಕರವೇ ಮುಖಂಡರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ತಿಮ್ಮರಾಜು, ತಾಲ್ಲೂಕು ಗೌರವಾಧ್ಯಕ್ಷ ಗೋ.ಬಸವರಾಜ್, ಡಿಕೆಎಸ್ ದಾದಾಪೀರ್, ಎಂ.ಕೆ.ಜಾಫರ್, ಮೊಹಮ್ಮದ್ ಸುಹೇಲ್, ಖಲಂದರ್, ರವಿ, ಮಂಜುನಾಥ್, ದೊಡ್ಮನೆ ಅಭಿಮಾನಿಗಳ ಬಳಗ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಹಾಜರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *