ಚಿತ್ರದುರ್ಗ:
ನಗರದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ, ಸಿಬ್ಬಂದಿ ಬುಧವಾರ ನಗರದ ವಿವಿಧೆಡೆ ದಾಳಿ ನಡೆಸಿತು. ಸಂತೆಹೊಂಡ ಗಾಂಧಿ ನಗರದ ವಿವಿಧ ಪ್ರದೇಶಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡ ತಂಬಾಕು ಉತ್ಪನ್ನ ಮಾರಾಟಗಾರರ ಅಂಗಡಿಗಳಿಗೆ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ, ದಂಡ ವಿಧಿಸಿತು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಅಂಗಡಿ ಮಾಲಿಕರಿಗೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 35 ಪ್ರಕರಣಗಳನ್ನು ದಾಖಲಿಸಿ 3650ರೂ ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಬಿ.ಎಂ. ಪ್ರಭುದೇವ, ಸಾಮಾಜಿಕ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಪೊಲೀಸ್ ಇಲಾಖೆಯ ಶೃಂಗಾರಸಾಗರ್, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ, ನಾಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments