ಹಿರಿಯೂರು :
ಈ 2023 ನೇ ವರ್ಷದಲ್ಲಿನ ಜೀವನದ ಖುಷಿಯ ದಿನಗಳನ್ನು ಮತ್ತು ಸಂಭ್ರಮದ ಒಳ್ಳೆಯ ನೆನಪುಗಳನ್ನು ಮಾತ್ರ ಉಳಿಸಿಕೊಂಡು ಕಹಿ ನೆನಪುಗಳನ್ನು ನಾವೆಲ್ಲಾ ಮರೆಯೋಣ ಅಲ್ಲದೆ ಈ 2023 ನೇ ವರ್ಷದಲ್ಲಿ ನಾವು ಅನುಭವಿಸಿದ ಅನೇಕ ಕಷ್ಟ ಕಾರ್ಪಣ್ಯಗಳು, ನೋವುಗಳು ನಮ್ಮಿಂದಸ ದೂರವಾಗಿ ಮುಂಬರುವ 2024 ರ ಹೊಸವರ್ಷವು ನಮಗೆಲ್ಲಾ ಸುಖ ಸಂತೋಷ ಹಾಗೂ ನೆಮ್ಮದಿಯನ್ನು ತರಲಿ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2023ರ ಬೀಳ್ಕೊಡುಗೆ ಹಾಗೂ 2024 ರ ಹೊಸ ವರ್ಷದ ಸ್ವಾಗತ ಸಮಾರಂಭ ಹಾಗೂ “ಬೆಳದಿಂಗಳ ಊಟ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ರೆಡ್ ಕ್ರಾಸ್ ಸಂಸ್ಥೆಗೆ ಕಳೆದ ಹತ್ತು ವರ್ಷಗಳಿಂದ ಹಲವಾರು ರಾಜ್ಯಮಟ್ಟದ ಪ್ರಶಸ್ತಿಗಳು ದೊರೆತಿದ್ದು, ಈ ವರ್ಷವೂ ಸಹ ರೆಡ್ ಕ್ರಾಸ್ ಸಂಸ್ಥೆ ಸಾರ್ವಜನಿಕರ ಸೇವೆಯಲ್ಲಿ ರಾಜ್ಯದ ರಾಜ್ಯಪಾಲರಿಂದ ಪ್ರಥಮ ತಾಲ್ಲೂಕು ಪ್ರಶಸ್ತಿಗೆ ಪಾತ್ರವಾಗಿದ್ದು, ಇದಕ್ಕೆ ನಮ್ಮ ರೆಡ್ ಕ್ರಾಸ್ ಸಂಸ್ಥೆಯ ಎಲ್ಲಾ ಸದಸ್ಯರ ಪರಿಶ್ರಮ, ನಮ್ಮ ಜನಪರ ಕಾರ್ಯಗಳು ಹಾಗೂ ದಾನಿಗಳ ಸಹಕಾರವೇ ಕಾರಣವಾಗಿದೆ ಎಂಬುದಾಗಿ ಹೇಳಿದರು.
ಪ್ರಾಸ್ತಾವಿಕವಾಗಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರುಹನುಮಂತರಾಯಪ್ಪ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆ ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆ ನೇತೃತ್ವದಲ್ಲಿ ಪ್ರತಿವರ್ಷವೂ ಈ “ಬೆಳದಿಂಗಳ ಊಟ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಈ ವಿದ್ಯಾಸಂಸ್ಥೆ ಶಿಕ್ಷಕ-ಶಿಕ್ಷಕಿಯರು, ನೆರೆಹೊರೆಯವರನ್ನು ಬೆಳದಿಂಗಳ ಊಟ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ನೆರೆಹೊರೆಯವರ ಜೊತೆ ಒಂದು ಉತ್ತಮ ಬಾಂಧವ್ಯ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಹಿರಿಯ ಸದಸ್ಯರಾದ ಪ್ರೋ.ಬಿ.ಕೆ.ನಾಗಣ್ಣ, ಎಸ್.ಜೋಗಪ್ಪ, ಮಹಾಬಲೇಶ್ವರಶೆಟ್ಟಿ, ಎ.ರಾಘವೇಂದ್ರ, ವಾಣಿಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಧರಣೇಂದ್ರಯ್ಯ, ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಸಣ್ಣಭೀಮಣ್ಣ, ವಿದ್ಯಾಸಂಸ್ಥೆಯ ಖಜಾಂಚಿ ಆರ್. ವಸಂತ್ ಕುಮಾರ್, ಪಿ.ಆರ್.ಸತೀಶ್ ಬಾಬು, ಸೇರಿದಂತೆ ವಾಣಿವಿಲಾಸ ವಿದ್ಯಾಸಂಸ್ಥೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ನೆರೆಹೊರೆಯವರು ಉಪಸ್ಥಿತರಿದ್ದರು.
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments