ಹಿರಿಯೂರು :
ಕಳೆದ 2023 ನೇ ವರ್ಷದ ಕಹಿ ನೆನಪುಗಳನ್ನೆಲ್ಲಾ ಮರೆತು, ಕೇವಲ ಸಿಹಿನೆನಪುಗಳನ್ನು ಮಾತ್ರ ಮೆಲುಕು ಹಾಕುವ ಮೂಲಕ ಇಂದಿನ 2024 ರ ಹೊಸವರ್ಷವನ್ನು ನಾವೆಲ್ಲರೂ ಸಡಗರ ಸಂಭ್ರಮಗಳಿಂದ ಸ್ವಾಗತಿಸೋಣ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2024ರ ಹೊಸವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೊಸವರ್ಷವು ಎಲ್ಲರ ಜೀವನದಲ್ಲೂ ಸುಖಶಾಂತಿ ನೆಮ್ಮದಿಯನ್ನು ನೀಡುವ ಜೊತೆಗೆ ಆರೋಗ್ಯ ಆಯಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಶುಭಹಾರೈಸಿದರಲ್ಲದೆ, ಮುಂಬರುವ ವಾರ್ಷಿಕ ಪರೀಕ್ಷೆಗೆ ಈಗಿನಿಂದಲೇ ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವತ್ತ ನಿಮ್ಮ ಗಮನವನ್ನು ಹರಿಸಬೇಕು ಎಂಬುದಾಗಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ವಾಣಿವಿಲಾಸ ವಿದ್ಯಾಸಂಸ್ಥೆ ಮುಖ್ಯಶಿಕ್ಷಕಿಯಾದ ಶ್ರೀಮತಿ ಸೌಮ್ಯ, ಶಿಕ್ಷಕರಾದ ಉಮೇಶ್ ಯಾದವ್, ಶಿವರಾಜ್ ನಾಯಕ್, ಶಿಕ್ಷಕಿಯರುಗಳಾದ ಶ್ರೀಮತಿ ವಸಂತಾ, ಶ್ರೀಮತಿ ನಂದಿನಿ, ಶ್ರೀಮತಿ ಗಂಗಮ್ಮ, ಶ್ರೀಮತಿ ರಂಜಿತಾ, ಶ್ರೀಮತಿ ಸಬೀಹಾ, ಶ್ರೀಮತಿ ಹೇಮಲತಾ, ಶ್ರೀಮತಿ ಮುಬೀನಾ, ಅಂಬಿಕಾ, ಶ್ರೀಮತಿ ತಿಪ್ಪಮ್ಮ, ಶ್ರೀಮತಿ ನೇತ್ರಾವತಿ, ಶ್ರೀಮತಿ ಖುಷುಬು, ಶ್ರೀಮತಿ ಜಯಸುಧಾ, ಶ್ರೀಮತಿ ಅಸ್ಮತ್, ಶ್ರೀಮತಿ ರೋಜಾ, ಶ್ರೀಮತಿ ಸಾದಿಕಾ, ಪೂಜಾ, ಉಮಾ, ಸೇರಿದಂತೆ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments