ಹಿರಿಯೂರು :
ನಗರದ ನೆಹರು ಕ್ರೀಡಾಂಗಣದಲ್ಲಿರುವ ವಾಣಿವಿಲಾಸ ವಿದ್ಯಾಸಂಸ್ಥೆಯು ಈ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.75 ರಷ್ಟು ಫಲಿತಾಂಶ ಬಂದಿದ್ದು, ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪನವರು ಸಂತಸ ವ್ಯಕ್ತಪಡಿಸಿದ್ದಾರೆ.
ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಎ.ಬಿಪುಲ್ 625 ಅಂಕಗಳಿಗೆ 573 ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿದ್ದು, ರಚನಾನಂದಿನಿಗೌಡ ಪಿ.ಹೆಚ್. 540 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಓ.ಅಮೂಲ್ಯ 515 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಈ ಸಾಲಿನಲ್ಲಿ ಪರೀಕ್ಷೆ ಬರೆದ 28 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಉತ್ತೀರ್ಣರಾಗಿದ್ದಾರೆ ಎಂಬುದಾಗಿ ಅವರು ತಿಳಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳೂ ಸಹ ಅತ್ಯುತ್ತಮ ಅಂಕಗಳನ್ನು ಪಡೆದು ನಮ್ಮ ವಿದ್ಯಾಸಂಸ್ಥೆಗೆ ಹಾಗೂ ಹೆತ್ತ ತಂದೆ-ತಾಯಿಗಳಿಗೆ, ಬೋಧಿಸಿದ ಶಿಕ್ಷಕರಿಗೆ ಕೀರ್ತಿಯನ್ನು ತಂದಿದ್ದು, ಈ ಉತ್ತಮ ಫಲಿತಾಂಶಕ್ಕೆ ನಮ್ಮ ಪ್ರೌಢಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿ ವರ್ಗದವರ ಪರಿಶ್ರಮವೇ ಕಾರಣವಾಗಿದೆ ಎಂಬುದಾಗಿ ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ರಘುನಾಥ್, ವಿದ್ಯಾಸಂಸ್ಥೆಯ ಖಜಾಂಚಿ ಆರ್.ವಸಂತ್ ಕುಮಾರ್, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶ್ರೀಮತಿ ನಂದಿನಿ, ಪ್ರೌಢಶಾಲಾ ಶಿಕ್ಷಕ-ಶಿಕ್ಷಕಿಯರುಗಳಾದ ಉಮೇಶ್ ಯಾದವ್, ಶ್ರೀಮತಿ ಗಂಗಮ್ಮ, ಶ್ರೀಮತಿ ರಂಜಿತಾ, ಶ್ರೀಮತಿ ಸಬೀಹಾ, ಕುಮಾರಿ ಪೂಜಾ ಸೇರಿದಂತೆ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಅತ್ಯುತ್ತಮ ಅಂಕಪಡೆದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments