ಹಿರಿಯೂರು :
ನಗರದಲ್ಲಿ ಸಾರ್ವಜನಿಕರ ಅಗತ್ಯತೆಗಾಗಿ ನಿರ್ಮಿಸಲಾಗಿರುವ ಶೌಚಾಲಯದ ಸ್ವಚ್ಛತೆಯನ್ನು ಕಾಪಾಡುವುದು ನಗರಸಭೆ ಸಿಬ್ಬಂದಿಗಳದಷ್ಟೇ ಜವಾಬ್ದಾರಿಯಲ್ಲ, ನಗರದ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ಹೇಳಿದರು.
ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಶೌಚಾಲಯ ಅಭಿಯಾನದ ಅಂಗವಾಗಿ ಪಬ್ಲಿಕ್ ಟಾಯ್ಲೆಟ್ ಟೂರ್ಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ನಮ್ಮ ನಗರ ಬಯಲು ಶೌಚಮುಕ್ತವಾಗಬೇಕು, ಈ ನಿಟ್ಟಿನಲ್ಲಿ ಸಾರ್ವಜನಿಕರು ಪ್ರತಿಮನೆಯಲ್ಲೂ ಶೌಚಾಲಯ ನಿರ್ಮಿಸಿ, ಬಳಕೆ ಮಾಡುವ ಮೂಲಕ ನಗರದ ಸ್ವಚ್ಛತೆಗೆ ಸಹಕರಿಸಬೇಕು ಎಂಬುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಜಾತಪಥ ಸಂಚಲನದೊಂದಿಗೆ ಶೌಚಾಲಯ ಬಳಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಮೀನಾಕ್ಷಿ, ಕಿರಿಯ ಆರೋಗ್ಯ ನಿರೀಕ್ಷಕರಾದ ಮಾಲಿಂಗರಾಜ್, ಮೋಹನ್, ಅಜಯ್, ದಫೇದಾರ್ ಈರಖ್ಯಾತಪ್ಪ, ಮತ್ತು ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments