ಹಿರಿಯೂರು :
ನಗರದ ದಕ್ಷಿಣ ಕಾಶಿ ತೇರುಮಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನೆಲೆಸಿರುವ ಶ್ರೀಕಾಳಿಕಾದೇವಿ ಅಮ್ಮನವರ ಕಡೆ ಕಾರ್ತಿಕ ಮಹೋತ್ಸವ ಪೂಜಾ ಕಾರ್ಯಕ್ರಮವು ಶುಕ್ರವಾರದಂದು ಅದ್ದೂರಿಯಾಗಿ ನೆರವೇರಿಸಲಾಯಿತು ಎಂಬುದಾಗಿ ದೇವಸ್ಥಾನದ ಪ್ರಧಾನ ಅರ್ಚಕರಾದ ಹೆಚ್.ವಿ.ನಾಗರಾಜ್ ಆಚಾರಿ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಕಾಳಿಕಾ ಮಾತೆಗೆ ಅಭಿಷೇಕ, ಅರ್ಚನೆ, ಲೋಕಕಲ್ಯಾಣಾರ್ಥವಾಗಿ ವಿಶೇಷಪೂಜೆ ಕಾರ್ಯಕ್ರಮ ಹಾಗೂ ಸಂಜೆ ದೀಪೋತ್ಸವ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಸಲಾಯಿತು.
ಈ ಕಡೇ ಕಾರ್ತಕೋತ್ಸವ ಕಾರ್ಯಕ್ರಮಕ್ಕೆ ನೂರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾಳಿಕಾದೇವಿ ಅಮ್ಮನವರ ಪೂಜಾ ವಿಧಿವಿಧಾನಗಳನ್ನು ಪೂರೈಸಿ, ಅಮ್ಮನವರ ಕೃಪೆಗೆ ಪಾತ್ರರಾದರಲ್ಲದೆ, ಪ್ರಸಾದವನ್ನು ಸ್ವೀಕರಿಸಿ, ಭಕ್ತಿಪ್ರದರ್ಶಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments