ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ಬ್ರಹ್ಮರಥೋತ್ಸವ ಫೆಬ್ರವರಿ 24ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ

by | 09/02/24 | ಸುದ್ದಿ


ಹಿರಿಯೂರು :
ದಕ್ಷಿಣಕಾಶಿಯೆಂದೇ ಪ್ರಸಿದ್ಧವಾಗಿರುವ ಶ್ರೀತೇರುಮಲ್ಲೇಶ್ವರಸ್ವಾಮಿಯ ಬ್ರಹ್ಮರಥೋತ್ಸವ ಇದೇ ಫೆಬ್ರವರಿ 24 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಮಘಾ ನಕ್ಷತ್ರದಲ್ಲಿ ನಡೆಯಲಿದೆ ಎಂಬುದಾಗಿ ತಾಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ಜಾತ್ರಾಮಹೋತ್ಸವ ಇದೇ ಫೆಬ್ರವರಿ 13ರಿಂದ ಕಂಕಣ ಕಲ್ಯಾಣೋತ್ಸವದೊಂದಿಗೆ ಪ್ರಾರಂಭಗೊಂಡು, ಫೆಬ್ರವರಿ 28ರವರೆಗೆ ಬಹಳ ವಿಜೃಂಭಣೆಯಿಂದ ನಡೆಯಲಿದೆ.
ಫೆಬ್ರವರಿ 14 ರಂದು ರಾತ್ರಿ 8ಕ್ಕೆ ಮಂಟಪೋತ್ಸವ, ಫೆಬ್ರವರಿ 15ರಂದು ರಾತ್ರಿ 8ಕ್ಕೆ ಗಿಳಿ ಮಹೋತ್ಸವ ಫೆಬ್ರವರಿ 16ರಂದು ರಾತ್ರಿ 8ಕ್ಕೆ ಗಂಡಬೇರುಂಡ ಮಹೋತ್ಸವ, ಫೆಬ್ರವರಿ 17ರಂದು ರಾತ್ರಿ 8.00ಕ್ಕೆ ನವಿಲು ಮಹೋತ್ಸವ, ಫೆಬ್ರವರಿ 18ರಂದು ರಾತ್ರಿ 8ಕ್ಕೆ ಸಿಂಹ ಮಹೋತ್ಸವ, ಫೆಬ್ರವರಿ 19ರಂದು ರಾತ್ರಿ 8ಕ್ಕೆ ನಂದಿ ಮಹೋತ್ಸವ ನಡೆಯಲಿದ್ದು,
ಫೆಬ್ರವರಿ 20ರಂದು ರಾತ್ರಿ 8ಕ್ಕೆ ಸರ್ಪ ಮಹೋತ್ಸವ , ಫೆಬ್ರವರಿ 21ರಂದು ರಾತ್ರಿ 8ಕ್ಕೆ ಅಶ್ವ ಮಹೋತ್ಸವ, ಫೆಬ್ರವರಿ 22ರಂದು ರಾತ್ರಿ 8ಕ್ಕೆ ಗಜಮಹೋತ್ಸವ(ಮೂರು ಕಳಸ ಸ್ಥಾಪನೆ) ಫೆಬ್ರವರಿ 23ರಂದು ಬೆಳಿಗ್ಗೆಯಿಂದ ರಾತ್ರಿಯವರೆಗೆ ಬಸವ ಮಹೋತ್ಸವ (ದೊಡ್ಡ ಉತ್ಸವ) ಅಕ್ಕಿ ತಂಬಿಟ್ಟಿನ ಆರತಿ ಕಾರ್ಯಕ್ರಮ ನಡೆಯಲಿದೆ.
ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ಬೀರೇನಳ್ಳಿ ಮಜುರೆ ಕರಿಯಣ್ಣ ಹಟ್ಟಿ ಗ್ರಾಮದ ವೀರಕರಿಯಣ್ಣ ದೇವರ ನೇತೃತ್ವದಲ್ಲಿ ಫೆಬ್ರವರಿ 24 ರಂದು ಬೆಳಿಗ್ಗೆ 9ಕ್ಕೆ ಶಿವಧನಸ್ಸಿನ ಗಂಗಾ ಸ್ನಾನದ ಉತ್ಸವ ನಂತರ ಮಧ್ಯಾಹ್ನ 12ಕ್ಕೆ ಮಘಾ ನಕ್ಷತ್ರದಲ್ಲಿ ತೇರುಮಲ್ಲೇಶ್ವರಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದ್ದು ,ಮಧ್ಯಾಹ್ನ 1.30ಕ್ಕೆ ಪ್ರಸಾದ ವಿನಿಯೋಗ, ಸಂಜೆ 5ಕ್ಕೆ ಚಂದ್ರಮೌಳೇಶ್ವರ ಮತ್ತು ಉಮಾಮಹೇಶ್ವರ ರಥೋತ್ಸವಗಳು ಸಹ ನಡೆಯಲಿವೆ.
ಫೆಬ್ರವರಿ 25 ರಂದು ಸಂಜೆ 5ಕ್ಕೆ ಸಿದ್ದನಾಯಕ ವೃತ್ತದಲ್ಲಿ ಶ್ರೀ ಮದಕರಿ ಯುವಕ ಸಂಘದಿದ ಜಂಗೀ ಕುಸ್ತಿಯನ್ನು ಏರ್ಪಡಿಸಲಾಗಿದೆ. ಫೆಬ್ರವರಿ 26ರಂದು ರಾತ್ರಿ 8ಕ್ಕೆ ಸುಮಂಗಲಿಯರಿಂದ ಕರ್ಪೂರದಾರತಿ , ಫೆಬ್ರವರಿ 27 ರಂದು ರಾತ್ರಿ 8ಕ್ಕೆ ಚಿಟುಗ ಮಲ್ಲೇಶ್ವರಸ್ವಾಮಿ ದೇವಸ್ತಾನದಲ್ಲಿ ಅಭಿಷೇಕ ಹಾಗೂ ಉಯ್ಯಾಲೋತ್ಸವ, ವಸಂತೋತ್ಸವ ,ಓಕುಳಿ ಪರ್ವಟೋತ್ಸವ ನಡೆಯಲಿದೆ. . ಫೆಬ್ರವರಿ 28ರಂದು ಸಂಜೆ 4ಕ್ಕೆ ಕಂಕಣ ವಿಸರ್ಜನೆಯೊಂದಿಗೆ ಮಹೋತ್ಸವ ಮುಕ್ತಾಯಗೊಳ್ಳಲಿದೆ.
ಶ್ರೀತೇರುಮಲ್ಲೇಶ್ವರಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ತನು,ಮನ,ಧಾನ್ಯ ರೂಪದಲ್ಲಿ ಸಹಕರಿಸುವುದು, ಸಾರ್ವಜನಿಕರು ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂಬುದಾಗಿ ತಾಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page