ಹಿರಿಯೂರು :
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಿಢೀರನೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ವೈದ್ಯರುಗಳ ಅನುಪಸ್ಥಿತಿಯನ್ನು ಗಮನಿಸಿ, ಅಲ್ಲಿನ ಸಿಬ್ಬಂದಿಗಳನ್ನು ತೀವ್ರತರಾಟೆಗೆ ತೆಗೆದುಕೊಂಡರು.
ನಗರದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತುರ್ತು ಚಿಕಿತ್ಸೆ ಸಿಗದೇ ರೋಗಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದ್ದು, ರೋಗಿಗಳ ಪ್ರಾಣದೊಂದಿಗೆ ಆಟವಾಡುತ್ತಿರುವ ವೈದ್ಯರುಗಳ ನಿರ್ಲಕ್ಷ್ಯ ಧೋರಣೆಗೆ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬುದಾಗಿ ಸಚಿವರು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಹಾಜರಾತಿ ಪುಸ್ತಕ ಪರಿಶೀಲಿಸಿದರಲ್ಲದೆ, ಆಸ್ಪತ್ರೆಯ ಒಳರೋಗಿಗಳ ಯೋಗಕ್ಷೇಮ ವಿಚಾರಿಸಿ, ಇಲ್ಲಿ ನಿಮಗೆ ಏನಾದರೂ ಅವ್ಯವಸ್ಥೆ ಕಂಡು ಬಂದಲ್ಲಿ ಕೂಡಲೇ ನನಗೆ ಕರೆ ಮಾಡಿ, ಮಾಹಿತಿ ನೀಡುವಂತೆ ರೋಗಿಗಳಿಗೆ ಸೂಚಿಸಿದರಲ್ಲದೆ, ಆಸ್ಪತ್ರೆಯ ರೋಗಿಗಳನ್ನು ಮುತುವರ್ಜಿಯಿಂದ ನೋಡಿಕೊಳ್ಳುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ತಿಳಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments