ನಗರಸಭೆಗೆ ದಂಡವಿಧಿಸಲು ಅವಕಾಶವನ್ನ ನೀಡದೇ ತಪ್ಪದೇ ಕಂದಾಯ ಪಾವತಿಸಲು ಆಯುಕ್ತರಾದ ಮಹಂತೇಶ್ ಸೂಚನೆ.

by | 20/10/23 | ಆರ್ಥಿಕ


ಹಿರಿಯೂರು :
ನಗರದ ನಾಗರೀಕರು ಪ್ರತಿವರ್ಷ ಮಾರ್ಚ್ ಅಥವಾ ಎಪ್ರಿಲ್ ತಿಂಗಳ ಒಳಗಾಗಿ ತಮ್ಮ ಸ್ಥಿರಾಸ್ತಿಗಳಿಗೆ ಕಂದಾಯವನ್ನು ನಗರಸಭೆಗೆ ಕಡ್ಡಾಯವಾಗಿ ಪಾವತಿಸುವುದರಿಂದ ತೆರಿಗೆಯಲ್ಲಿ ರಿಯಾಯಿತಿ ಪಡೆಯಬಹುದಾಗಿದ್ದು, ನಗರಸಭೆಗೆ ದಂಡ ವಿಧಿಸಲು ಅವಕಾಶ ನೀಡದೇ ತಪ್ಪದೇ ಕಂದಾಯವನ್ನು ಕಟ್ಟುವ ಮೂಲಕ ನಗರದ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ಹೇಳಿದರು.
ನಗರಸಭೆ ವತಿಯಿಂದ ತೆರಿಗೆ ವಸೂಲಾತಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಈ ಪ್ರಯುಕ್ತ ನಗರದ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ, ಕಂದಾಯ ಕಟ್ಟುವ ಬಗ್ಗೆ ಅರಿವು ಮೂಡಿಸಿದರಲ್ಲದೆ, ನಾಗರೀಕರು ಕಟ್ಟದೆ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಕಟ್ಟುನಿಟ್ಟಾಗಿ ಕಟ್ಟುವಂತೆ ಸೂಚನೆ ನೀಡಿ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ನಗರದ ಮನೆ, ನಿವೇಶನ, ವಾಣಿಜ್ಯ ಕಟ್ಟಡಗಳು, ಶಾಲಾ ಕಟ್ಟಡಗಳ ಮಾಲೀಕರುಗಳು ತಮ್ಮ ಸ್ವತ್ತಿನ ಬಾಕಿ ಹಾಗೂ ಚಾಲ್ತಿ ಸಾಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆಯನ್ನು ನಗರಸಭೆಗೆ ಪಾವತಿಸಲು ಸೂಚಿಸಿದರಲ್ಲದೆ, ನಗರಸಭೆ ಮಾಲೀಕತ್ವದ ಮಳಿಗೆಗಳ ಬಾಡಿಗೆದಾರರು ಮಳಿಗೆಗಳ ಬಾಕಿ ಶೀಘ್ರ ಪಾವತಿಸುವಂತೆ ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಮೀನಾಕ್ಷಿ, ಅಧಿಕಾರಿಗಳು ಹಾಗೂ ಹೋಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *