ಚಳ್ಳಕೆರೆ ಡಿ24 ನಗರದ 31 ವಾರ್ಡ್ ಗಳಲ್ಲಿ ನಗರೊತ್ತಾನದ ಯೋಜನೆ ಅಡಿಯಲ್ಲಿ ಸುಮಾರು 30 ಲಕ್ಷ ವೆಚ್ಚದ ಚರಂಡಿ ಡಕ್ ಗಳು ನಿರ್ಮಾಣವಾಗುತ್ತಿದ್ದು ನಗರಸಭೆಯ 18ನೇ ವಾರ್ಡಿನ ಅಂಬೇಡ್ಕರ್ ನಗರದ ವಾರ್ಡ್ ನ ಸದಸ್ಯ ಹಾಗೂ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು ನಗರಸಭೆ ನಗರೊತ್ತಾನದ ಅನುದಾನದಲ್ಲಿ ಎಲ್ಲಾ ವಾರ್ಡ್ಗಳಲ್ಲಿ ಚರಂಡಿಗಳಿಗೆ ಡಕ್ಕುಗಳು ನಿರ್ಮಾಣಗೊಳ್ಳುತ್ತಿದ್ದು ಗುತ್ತಿಗೆದಾರರು ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಯಾವುದೇ ಲೋಪಗಳು ಕಂಡುಬಂದಲ್ಲಿ ನಿರ್ದಾಕ್ಷಣವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದರು ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಟಿ ರಘುಮೂರ್ತಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು ನಗರದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ನಗರದ ಎಲ್ಲಾ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಗರಸಭೆ ವತಿಯಿಂದ ಹಂತ ಹಂತವಾಗಿ ಕೈಗೊಳ್ಳಲಿದ್ದು ಚಳ್ಳಕೆರೆ ಕ್ಷೇತ್ರ ಇನ್ನಷ್ಟು ಸುಂದರಮಯವಾಗಿಸಲು ನಗರಸಭೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದು ನಗರ ಸಭೆಯ ಉದ್ದೇಶವಾಗಿದ್ದು ಸಾರ್ವಜನಿಕರು ಸಹ ಚರಂಡಿಗಳ ಮೇಲೆ ಮನೆಗಳನ್ನು ನಿರ್ಮಿಸಿಕೊಳ್ಳದೆ ನಗರ ಸಭೆಯ ಪೌರಕಾರ್ಮಿಕರಿಗೆ ಸ್ವಚ್ಛತೆಗೊಳಿಸಲು ಸಹಕಾರ ನೀಡಬೇಕು ಎಲ್ಲೆಂದರಲ್ಲಿ ಕಸವನ್ನು ಎಸೆಯದೆ ನಗರ ಸಭೆಯ ವಾಹನಗಳಿಗೆ ನೀಡುವ ಮೂಲಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಂಡು ಕೊರೋನಾದಂತ ಮಾರಕ ರೋಗಗಳನ್ನು ತಡೆಗಟ್ಟಲು ಸಹಕಾರ ನೀಡಬೇಕು ಎಂದು ಕೋರಿದರು
ಈ ಸಂದರ್ಭದಲ್ಲಿ ರಾಮಣ್ಣ ಬಂಗ್ಲೆ ನಾಗರಾಜ್
ಅಂಗಡಿ ಸೀನಪ್ಪ ಗುತ್ತಿಗೆದಾರ ಸತ್ಯನಾರಾಯ ರೆಡ್ಡಿ ಸಿದ್ದಪ್ಪ ಇತರರು ಇದ್ದರು
0 Comments