ಹಿರಿಯೂರು :
ನಮ್ಮ ತಾಲ್ಲೂಕಿನಲ್ಲಿ ಧ್ಯಾನಮಂದಿರ ನಿರ್ಮಾಣವಾಗುತ್ತಿರುವುದು ನಿಜಕ್ಕೂ ಸಂತಸ ತಂದಿದ್ದು, ಇಂದಿನ ಒತ್ತಡದ ಬದುಕಿನಲ್ಲಿ ಮಾನಸಿಕ ಆರೋಗ್ಯಕ್ಕಾಗಿ ಇಂತಹ ಧ್ಯಾನಮಂದಿರಗಳು ಅತ್ಯಂತ ಪ್ರಯೋಜನಕಾರಿಯಾಗಲಿದ್ದು, ಈ ಧ್ಯಾನಮಂದಿರದಿಂದ ಲಕ್ಷಾಂತರ ಜನರಿಗೆ ಪ್ರಯೋಜನವಾಗಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ಮಹಾಮೈತ್ರೇಯ ಪತ್ರೀಜಿ ಪಿರಮಿಡ್ ನಿರ್ಮಾಣ ಸ್ಥಳದಲ್ಲಿ ಮಿನಿ ಪಿರಮಿಡ್ ಧ್ಯಾನಮಂದಿರ ಹಾಗೂ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಹ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಧ್ಯಾನಮಂದಿರ ನಿರ್ಮಾಣಕ್ಕೆ ನಮ್ಮ ಸರ್ಕಾರದ ವತಿಯಿಂದ ಆರ್ಥಿಕ ನೆರವನ್ನು ನೀಡುವುದಾಗಿ ಈ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಗುರುನಾಥ ಶೆಟ್ರು, ಶ್ರೀನಿವಾಸ್ ಬಾಬು, ತ್ರಯಂಬಕಮೂರ್ತಿ, ದೇವದಾಸ್, ರಮೇಶ್, ರಘು, ಗೌರೀಶ್, ವೀರಭದ್ರಪ್ಪ, ಮಂಜುಳಾ, ಸರಿತಾ, ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments