ನಾಡಿನ ಸಮಸ್ತ ಅಯ್ಯಪ್ಪ ಮಾಲಾದಾರಿಗಳಿಗೆ ಹಾಗೂ ಭಕ್ತರಿಗೆ ಮಕರ ಸಂಕ್ರಾಂತಿ ಹಾಗೂ ಮಕರ ಜ್ಯೋತಿಯ ಆರ್ಥಿಕ ಶುಭಾಶಯ ಹೇಳಿದರು ಅಯ್ಯಪ್ಪ ಮಾಲಾದಾರಿಗಳು ಶಬರಿಮಲೆ ಯಾತ್ರೆ ಶುಭವಾಗಲಿ ಎಂದು ಹರಿಹರಸುತ ಸೇವಾ ಸಮಿತಿ ಸದಸ್ಯ ಕೀರ್ತಿಪ್ರಸಾದ್.

by | 11/01/24 | ಸುದ್ದಿ


ಚಳ್ಳಕೆರೆ .
ಶ್ರೀಹರಿಹರಸುತ ಸೇವಾ ಸಮಿತಿಯ ಶ್ರೀ ಅಯ್ಯಪ್ಪ ಸ್ವಾಮಿ ಯಸನ್ನಿಧಿಯಲ್ಲಿ 48 ದಿನಗಳ ಕಾಲ ವ್ರತವನ್ನು ಕೈಗೊಂಡ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಮಹಾ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಿದ ನಂತರ ಶಬರಿಮಲೆ ಅಯಯ್ಯಪ್ಪ ಸನ್ನಿಧಿ ಯಲ್ಲಿ ಮಕರ ಜ್ಯೋತಿ ದರ್ಶನ ಪಡೆಯಲು ಪ್ರಯಾಣ ಬೆಳೆಸಿದರು.


ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಅಭಿಷೇಕ, ಅಲಂಕಾರ ಪೂಜೆ, ಪುಣ್ಯಪ್ರದವಾದ ಹದಿನೆಂಟು ಮೆಟ್ಟಿಲುಗಳಿಗೆ ಶ್ರೇಷ್ಠ ಪಡಿ ಪೂಜೆ ನಡೆಸಲಾಯಿತು. ವಿಶೇಷವಾಗಿ ಸ್ವಾಮಿಯ ಮೂರ್ತಿಗೆ ಅಭಿಷೇಕ, ಭಸ್ಮ, ಹಾಲು, ಜೇನು, ಪಂಚಾಮೃತ, ಸೀಯಾಳ ನೀರು, ಶ್ರೀಗಂಧ, ಚಂದನ, ಪನ್ನೀರು, ಸೇರಿದಂತೆ ವಿವಿಧ ಪದಾರ್ಥಗಳಿಂದ ಅಭಿಷೇಕ ನೆರವೇರಿಸಿದರು. ಬಳಿಕ ಅನ್ನ ಸಂತರ್ಪಣೆ ನಡೆಯಿತು.
ಭಕ್ತರು ಮಾಲಾಧಾರಿಗಳಿಂದ ತುಪ್ಪದ ಕಾಯಿಗಳನ್ನು ತುಂಬಿಸಿದರು, ನಂತರ ಸನ್ನಿಧಿಯಲ್ಲಿ ಇರುಮುಡಿಕಟ್ಟಿ ಪೂಜೆ ಸಲ್ಲಿಸಿ. ಶ್ರೀ ಅಯ್ಯಪ್ಪ ಸ್ವಾಮಿಯ ಭಕ್ತಿ ಗೀತೆಗಳನ್ನು ಹಾಡುತ್ತಾ ಸನ್ನಿಧಿಯಿಂದ ಶ್ರೀ ಶಕ್ತಿ ಆಂಜನೇಯ ದೇವಾಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಬರಿಮಲೆ ಯಾತ್ರೆಗೆ ತೆರಳಿದರು.

ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಮಹಾ ಪೂಜೆ, ಧಾರ್ಮಿಕ ಕಾರ್ಯಕ್ರಮ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯದರ್ಶನಕ್ಕೆ ಮಾಲಾಧಾರಿಗಳ ಯಾತ್ರೆ ತೆರಳಿತು.
ಶಬರಿಮಲೆ ಯಾತ್ರೆಗೆ ತೆರಳುವ ಶ್ರೀ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಗೆ ನೆರೆದಂತಹ ನೂರಾರು ಭಕ್ತಾದಿಗಳು ನಮಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ‌ ಹರಿಹರಸುತ ಸೇವಾ ಸಮಿತಿ ಸದಸ್ಯ ಕೀರ್ತಿ ಪ್ರಸಾದ್ ಶುಭಕೋರಿ ನಾಡಿನ ಸಮಸ್ತ ಅಯ್ಯಪ್ಪ ಮಾಲಾದಾರಿಗಳಿಗೆ ಹಾಗೂ ಭಕ್ತರಿಗೆ ಮಕರ ಸಂಕ್ರಾಂತಿ ಹಾಗೂ ಮಕರ ಜ್ಯೋತಿಯ ಆರ್ಥಿಕ ಶುಭಾಶಯ ಹೇಳಿದರು ಅಯ್ಯಪ್ಪ ಮಾಲಾದಾರಿಗಳು ಶಬರಿಮಲೆ ಯಾತ್ರೆ ಶುಭವಾಗಲಿ ಎಂದು ಹಾರೈಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page