. ಬಹಿರಿಯೂರು ಫೆ22 ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಇಲ್ಲೊಬ್ಬರು ನಾನು ಕಿರಾಣಿ ಅಂಗಡಿ ಪ್ರಾರಂಭಿಸಿದ್ದು ಮದ್ಯ ಮಾರಾಟಕ್ಕೆ ಪರವಾನಿಗೆ ನೀಡುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಹೌದು ಇದು ಹಿರಿಯೂರು ತಾಕೂಕಿನ ಐಮಂಗಲ
ಹೋಬಳಿ ಬುರುಜನರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಸನಾಯಕರಹಟ್ಟಿ ಗ್ರಾಮದರಾಜ್ಯ ಸಂಘಟನಾ ಕಾರ್ಯದರ್ಶಿ
ರಾಜ್ಯ ಗ್ರಾಮೀಣ ಅಭಿವೃದ್ಧಿ ಸಮಿತಿಯಹೆಚ್.ಸಿ.ಚಂದ್ರಶೇಖರ್ ಚಿಲ್ಲರೆ ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮತಿ ನೀಡುವಂತೆ ಇವರು ಹಿರಿಯೂರು
ಅಬಕಾರಿ ನಿರೀಕ್ಷರು ಮನವಿ ಮಾಡಿಕೊಂಡಿದ್ದಾರೆ.
ಮನವಿ ಪತ್ರದಲ್ಲೇನಿದೆ. ಹೊಸನಾಯಕರಹಟ್ಟಿ ವಾಸಿಯಾಗಿದ್ದು ನಾನು ನಮ್ಮ ಮನೆಯಲ್ಲಿ ಒಂದು ಚಿಲ್ಲರೆ ಅಂಗಡಿಯನ್ನು ತೆರೆಯುತ್ತಿದ್ದು ಈ ಚಿಲ್ಲರೆ
ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಉತ್ಸುಕನಾಗಿದ್ದು ತಾವುಗಳು ದಯಮಾಡಿ ನನ್ನ ಚಿಲ್ಲರೆ
ಅಂಗಡಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮತಿಯನ್ನು ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ದಿನಾಂಕ 21-2-2024 ರಂದು ಹಿರಿಯೂರು ಅಬಕಾರಿ ಉಪ ನಿರೀಕ್ಷಕರ ಕಚೇರಿಗೆ ಮನವಿ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲೆಂದೇ ಡಬ್ಬಾ ಅಂಗಡಿಗಳನ್ನು ಪ್ರಾರಂಭಿಸಿ ಕಿರಾಣಿ ಸಾಮಾನುಗಳ ಜತೆ ಮದ್ಯ ಮಾರಾಟ ಮಾಡುತ್ತಾರೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಮನವಿ ನೀಡುವುದನ್ನು ಕಂಡಿದ್ದೇವೆ ಆದರೆಹೊಸನಾಯಕರಹಟ್ಟಿ ಚಂದ್ರಶೇಖರ್ ಎಂಬುವರು ಚಿಲ್ಲರೆ ಅಂಗಡಿಯಲ್ಲಿ ಮದ್ಯಮಾರಾಟ ಮಾಡಲು ಅನುಮತಿ ಕೋರಿ ಅಬಕಾರಿ ಇಲಾಖೆಗೆ ಮನವಿ ನೀಡಿರುವುದು ಇದು ವಿಶೇಷವಾಗಿದೆ ಅಬಕಾರ ಇಲಾಖೆ ಪರವಾನಿಗೆ ನೀಡುತ್ತೋ ಇಲ್ಲವೊಇ ಕಾದು ನೋಡ ಬೇಕಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments