ಚಳ್ಳಕೆರೆ ಜನ11. ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ ಎಂದು ಶಾಸಕ ಟಿ.ರಘುಮೂರ್ತಿ ಯವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ವೈರಲ್ ಆಗಿದೆ.
ನಿಗಮ ಮಂಡಳಿ ಪ್ರಕಟಿಸುವ ಮುನ್ನವೇ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪತ್ರ ಬರೆದಿದ್ದು, ”ನನ್ನನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ. ಕಾಂಗ್ರೆಸ್ ಪಕ್ಷ 3 ಬಾರಿ ಸ್ಪರ್ಧೆಗೆ ಅವಕಾಶ ನೀಡಿದೆ.ವರಿಷ್ಠರಿಗೆ, ಕಾರ್ಯಕರ್ತರಿಗೆ ನಾನು ಋಣಿಯಾಗಿರುವೆ.ನಾನು ಸರಕಾರದಿಂದ ಸಹಕಾರ ನಿರೀಕ್ಷಿಸುವೆ, ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ.ಯಾವುದೇ ಸಮಯದಲ್ಲಿ ಪಕ್ಷಕ್ಕೆ ಮುಜುಗರ ಆಗದ ರೀತಿ ನಡೆದುಕೊಳ್ಳುವೆ” ಎಂದು ಬರೆದಿರುವ ಪತ್ರ ಈಗ ಮಾಧ್ಯಮದಲ್ಲಿ ವೈರಲ್ ಆಗಿದೆ.
ಒಂದೆಡೆ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ವೇಳೆಯಲ್ಲಿ ರಘುಮೂರ್ತಿ ನನಗೆ ಬೇಡ ಎಂದು ಪತ್ರ ಬರೆದು ಗಮನಸೆಳೆದಿದ್ದಾರೆ ಮಂತ್ರಿಗಿರಿ ಸಿಗಲಿಲ್ಲ ಎನ್ನುವ ಬೇಸರ ಇಲ್ಲ. ಈ ಆಡಳಿತದಲ್ಲಿ ಉನ್ನತ ಸ್ಥಾನ ದೊರೆಯುವ ನಿರೀಕ್ಷೆ, ವಿಶ್ವಾಸ ಇದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
*ಗೆದ್ದು ಬೀಗಿದಾಗ ಕ್ಷೇತ್ರದ ಜನತೆಯೊಂದಿಗೆ ಹಂಚಿಕೊಂಡ ಮಾತುಗಳು.*
ಮೂರನೇ ಬಾರಿಗೆ ಗೆಲುವು ಸಾಧಿಸಿದ ನನಗೆ ಮಂತ್ರಿಗಿರಿಗಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಕಳೆದ ಅವಧಿಯಲ್ಲಿ 2 ವರ್ಷ ಕರೊನಾ ಸೋಂಕು, ಜತೆಗೆ ಬಿಜೆಪಿ ಸರ್ಕಾರ ನಿರೀಕ್ಷಿತ ಅನುದಾನ ನೀಡದೆ ಅಭಿವೃದ್ಧಿ ಕಾರ್ಯ ಕುಂಠಿತವಾಯಿತು.
ನಗರದಲ್ಲಿ ಯುಜಿಡಿ, ರಾಜಕಾಲುವೆ ದುರಸ್ತಿ ಕಾರ್ಯ, ನಗರಸಭೆ ಕಟ್ಟಡ, ರಸ್ತೆಗಳ ವಿಸ್ತರಣೆ ಕಾರ್ಯ ಸೇರಿ ಕೆಲ ಕೆಲಸಗಳು ಅರ್ಧಕ್ಕೆ ನಿಂತಿದ್ದು, ಅವುಗಳನ್ನು ಪೂರ್ಣಗೊಳಿಸಲು ನಿಗಮ ಮಂಡಳಿ ಬದಲು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದರೆ ಸಾಕು.
ಚುನಾವಣೆ ಸಮಯದಲ್ಲಿ ವಿರೋಧ ಪಕ್ಷದವರು ಏನೆಲ್ಲ ಆರೋಪ ಮಾಡಿದರೂ, ಮತದಾರರು ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಗೆಲುವು ನೀಡಿದ್ದಾರೆ.
ಜನರ ವಿಶ್ವಾಸದಂತೆ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂಬ ಮಾತುಗಳು ಯ್ಯಾಟ್ರಿಕ್ ಗೆಲುವು ಸಾಧಿಸಿದಾಗ ಕ್ಷೇತ್ರದ ಕಾರ್ಯಕರ್ತರು.ಮುಖಂಡರು ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ ಸ್ವೀಕರಿಸಿದಾಗ ಹಂಚಿಕೊಂಡ ನೆನಪುಗಳಿವು. ಇವರ ನಡೆ ಅಧಿಕಾರದ ಹಿಂದೆಯಲ್ಲ ಇವರ ನಡೆ ಕ್ಷೇತ್ರದ ಅಭಿವೃದ್ಧಿಕಡೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.
0 Comments