ನಿಗಧಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯಮಾತಾಟ ಕಡಿವಾಣ ಹಾಕುವಂತೆ ಗ್ರಾಹಕರ ಒತ್ತಾಯ.

by | 10/01/24 | ಸುದ್ದಿ


ಚಳ್ಳಕೆರೆ ಜ.1 ಬಾರ್ ಆಂಡ್ ರೇಸ್ಟೊರೆಂಟ್‌ಗಳಲ್ಲಿ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡುವ ಮೂಲಕ ಗ್ರಾಹಕರನ್ನು ಸೂಲಿಗೆ ಮಾಡುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಗಮನ ಸೆಳೆದರೂ ಸಹ ಕ್ರಮ ಕೈಗೊಳ್ಳದೆ ಮೌನ ವಹಿಸಿರುವದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಮದ್ಯದಂಗಡಿಯಲ್ಲಿ ಮದ್ಯದ ಪೌಚ್ ಮೇಲಿನ ಎಂ.ಆರ್ ಪಿ ಬೆಲೆಗಿಂದ ಹೆಚ್ಚಿನ ಬೆಲೆ ಪಡೆಯುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಾರೆ ಎಂದು ಗ್ರಾಹಕರು ಆರೋಪಿಸಿದ್ದಾರೆ. ತಾಲೂಕಿನ ಕಾಲುವೆಹಳ್ಳಿ.ಯಾದಲಗಟ್ಟೆ ಸೇರಿದಂತೆ ಸುತ್ತ ಮುತ್ತಲ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದ ಕಾರಣ ಮದ್ಯ ಪ್ರಿಯರು ಗ್ರಾಮಗಳಿಗೆ ಸುಮಾರು 3 ಕಿ.ಮೀಟರ್ ದೂರದ ದೊಡ್ಡ ಉಳ್ಳಾರ್ತಿ ಗ್ರಾಮಕ್ಕೆ ಮದ್ಯ ಸೇವನೆಗೆ ಹೋಗುವುದು ಅನಿವಾರ್ಯವಾಗಿದೆ ಇದನ್ನೇ ಬಂಡವಾಳ ಮಾಡಿಕೊಂಡ ಮದ್ಯದ ಅಂಗಡಿ ಮಾಲಿಕರು ನಿಗದಿತ ಬೆಲೆಗಿಂತ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಮದ್ಯಪ್ರಿಯರಿಗೆ ಹೊರೆಯಾಗಿದೆ ಎಂದು ಆರೋಪಿಸಿದ್ದಾರೆ. ನಾವು ಕೂಲಿ ನಾಲಿ ಕೆಲಸಕ್ಕೆ ಹೋಗಿ ಮೈ ಕೈ ನೋವಾಗಿರುತ್ತದೆ ಅನಿವಾರ್ಯ ಕುಡಿಯಲೇ ಬೇಕು ಅದರಲ್ಲೂ ಮದ್ಯದಂಗಡಿಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ ಈ ಬಗ್ಗೆ ಅಬಕಾರಿ ಇಲಾಖೆಗೆ ತಿಳಿಸಿದರೆ ನಮಗೆ ಸಂಬಂಧವಿಲ್ಲ ಎನ್ನುತ್ತಾರೆ ಇದರಿಂದ ಅಬಕಾರಿ ಇಕಾಖೆ ಮೇಲೆ ಅನುಮಾನಕ್ಕೆ ಎಡೆ ಮಾಡಿದೆ.
ಸರ್ಕಾರ ನಿಗದಿಪಡಿಸಿರುವ ಎಂಆರ್‌ಪಿ ದರದಲ್ಲಿ ಗ್ರಾಹಕರಿಗೆ ಬಾರ್ ಮತ್ತು ರೇಸ್ಟೊರೆಂಟ್‌ಗಳಲ್ಲಿ ಮದ್ಯ ಮಾರಾಟ ಮಾಡಬೇಕು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆ ಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎನ್ನುವದು ಮದ್ಯ ಪ್ರೀಯರ ಆರೋಪ ಮಾಡುತ್ತಿದ್ದಾರೆ.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಒಂದೊಂದು ಅಂಗಡಿಯಲ್ಲಿ ಒಂದೊಂದು ಬೆಲೆಗೆ ಮಾರಾಟ ಮಾಡುತ್ತಾರೆ ಎಂಬ ಆರೋಪಗಳೂ ಸಹ ಕೇಳಿ ಬರುತ್ತವೆ. ಎಂಸಿ ವೀಕ್ಸಿ, 90m l ಪೌಚ್ ಎಂಆರ್‌ಪಿ ಬೆಲೆ 115 ರೂಪಾಯಿ ಇದೆ ಆದರೆ 140 ರೂಗಳಿಗೆ ದೊಡ್ಡ ಉಳ್ಳಾರ್ತಿ ಮದ್ಯದಂಗಡಿಯಲ್ಲಿ ಮಾರಾಟ ಮಾಡಿದರೆ ಇದೆ ಪೌಚ್ ಮತ್ತೊಂದು ಗ್ರಾಮೀಣ ಭಾಗದ ಮದ್ಯದಂಗಡಿಯಲ್ಲಿ 130 ರೂ, ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಮದ್ಯದಂಗಡಿ ಮಾಲಿಕರು ಗ್ರಾಹಕರನ್ನು ಸೂಲಿಗೆ ಮಾಡಲಾಗುತ್ತಿದೆ ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದರೆ ನಮಗೆ ಇದು ಸಂಬಂಧವಿಲ್ಲ ಎಂದು ಉತ್ತರ ನೀಡುತ್ತಾರೆ ಎಂದು ಯಾದಲಗಟ್ಟೆ ಗ್ರಾಮದ ಗ್ರಾಹಕರೊಬ್ಬರು ಮಾಹಿತಿ ನೀಡಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಜಾರಿಕರು ಅಧಿಕ ಬೆಲೆಗೆ ಮದ್ಯಮಾರಾಟಕ್ಕೆ ಕಡಿವಾಣ ಹಾಕುವರೇ ಕಾದು ನೋಡಬೇಕಿದೆ.

ಅಬಾಕಾರಿ ಇಲಾಖೆ ಅಧಿಕಾರಿಗಳು ಜ‌ಧ್ವನಿ ಡಿಟಿಟಲ್ ಮೀಡಿಯಾ ದೊಂದಿಗೆ ಮಾತನಾಡಿ ಜ.1 ರಿಂದಲೇ ಮದ್ಯದ ಬೆಲೆ ಹೆಚ್ಚಳವಾಗಿದ್ದು ಮದ್ಯದ ಪೌಚ್ ಮೇಲೆ ಇನ್ನು ಹಳೆ ಬೆಲೆ ಇದೆ ಹೊಸ ಬೆಲೆ ಮುದ್ರಣಗೊಂಡಿಲ್ಲ ಈಗ ಮದ್ಯದಂಗಡಿ ಮಾಲಿಕರು ಖರಿದಿ ಮಾಡಿರುತ್ತಾರೆ ಆದ್ದರಿಂದ ಹಳೆ ಬೆಲೆಗೆ ಮಾರಾಟ ಮಾಡಿದರೆ ಅಂಗಡಿಯವರುಗೆ ನಷ್ಟವಾಗುತ್ತದೆ ಹೊಸ ಬೆಲೆ ಮುದ್ರಣ ಗೊಂಡಾಗ ಹೆಚ್ಚುವರಿ ಬೆಲೆಗೆ ಮಾರಾಟ ಮಾಡಿದರೆ ಅಂತಹ ಅಂಗಡಿಯವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಬ ಭರವಸೆ ನೀಡಿದ್ದಾರೆ

.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page