ನೆಹರುಮಾರುಕಟ್ಟೆ ವ್ಯಾಪಾರಿಗಳ ಸ್ಥಳಾಂತರಪರಿಶೀಲಿಸಿ ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆನೀಡಿದ ಸಚಿವ ಡಿ.ಸುಧಾಕರ್

by | 23/12/23 | ಸುದ್ದಿ


ಹಿರಿಯೂರು :
ನಗರದ ನೆಹರು ಮಾರುಕಟ್ಟೆ ವ್ಯಾಪಾರಿಗಳ ಮನವಿಯ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭಾನುವಾರ ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ನಗರಸಭೆಯವರು ಕಳೆದ ಎರಡು ದಿನಗಳ ಹಿಂದೆ ಟ್ರಾಫಿಕ್ ಸಮಸ್ಯೆಯ ಕಾರಣದಿಂದ ಮಾರ್ಕೆಟ್ ಮುಂದಿನ ಬಸ್ ನಿಲ್ದಾಣದ ವ್ಯಾಪಾರಿಗಳನ್ನು ಸಂತೆ ಮೈದಾನಕ್ಕೆ ಸ್ಥಳಾಂತರ ಮಾಡುವ ಕಾರ್ಯಚರಣೆ ಕೈಗೊಂಡ ಪರಿಣಾಮ ತರಕಾರಿ ವ್ಯಾಪಾರಿಗಳ ತಂಡ ಸಚಿವರ ಮೊರೆ ಹೋಗಿತ್ತು.
ಈ ವೇಳೆ ವ್ಯಾಪಾರಿಗಳು ಇಲ್ಲಿಂದ ಸಂತೆ ಮೈದಾನಕ್ಕೆ ಸ್ಥಳಾಂತರ ಮಾಡಿದರೆ ಸಂಪೂರ್ಣ ವ್ಯಾಪಾರವೇ ಇಲ್ಲದಂತಾಗುತ್ತದೆ, ಮುಖ್ಯರಸ್ತೆಯಿಂದ ದೂರವಿದ್ದರೆ ವ್ಯಾಪಾರ ಆಗುವುದಿಲ್ಲ, ಇಲ್ಲಿಯೇ ಮಾರ್ಕೆಟ್ ಹಿಂಬದಿ ರಸ್ತೆಯಲ್ಲಿ ಒಂದು ಮಗ್ಗುಲಲ್ಲಿ ಕುಳಿತು ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂಬುದಾಗಿ ವ್ಯಾಪಾರಿಗಳು ಸಚಿವರಿಗೆ ಮನವಿ ಮಾಡಿದರು.
ವ್ಯಾಪಾರಿಗಳ ಬೇಡಿಕೆಗೆ ಉತ್ತರಿಸಿದ ಸಚಿವರು, ಈ ಭಾಗದಲ್ಲಿನ ಟ್ರಾಫಿಕ್ ಸಮಸ್ಯೆಗೆ ಇತಿಶ್ರೀ ಹಾಡಲೇಬೇಕಿದೆ, ಹಾಗಂತ ಇಲ್ಲಿನ ವ್ಯಾಪಾರಿಗಳ ದುಡಿಮೆಗೆ ತೊಂದರೆಯಾಗುವಂತಹ ನಿರ್ಧಾರ ಮಾಡುವುದಿಲ್ಲ, ಒಂದೆರಡು ದಿನದಲ್ಲಿ ಟ್ರಾಫಿಕ್ ಆಗದಂತೆ ವ್ಯಾಪಾರಕ್ಕೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುವುದು ಎಂಬುದಾಗಿ ಭರವಸೆ ನೀಡಿದರು.
ನಗರಸಭೆ ಪೌರಾಯುಕ್ತರಾದ ಹೆಚ್.ಮಹಾಂತೇಶ್ ಮಾತನಾಡಿ, ಬಸ್ ಅಪಘಾತದ ನಂತರ ಈ ಭಾಗದಲ್ಲಿ ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದು ಹೂವಿನ ಮಾರ್ಕೆಟ್ ಗೆ ಬರುವವರು ಉಂಟು ಮಾಡುತ್ತಿದ್ದ ಟ್ರಾಫಿಕ್ ಗೆ ಕಡಿವಾಣ ಹಾಕಲು ನಗರಸಭೆ ವತಿಯಿಂದ ಕ್ರಮ ತೆಗೆದುಕೊಂಡಿದ್ದೇವೆ, ಮಾರ್ಕೆಟ್ ನೊಳಗೆ ಕುಳಿತು ವ್ಯಾಪಾರ ಮಾಡಲು ಮೂಲಭೂತ ಸೌಕರ್ಯ ಕೊಡುತ್ತಿದ್ದೇವೆ ಎಂದರಲ್ಲದೆ,
ಇಲ್ಲಿನ ವ್ಯಾಪಾರಿಗಳ ಉಪಯೋಗಕ್ಕೆ ಎಂದು ನಿರ್ಮಿಸಿರುವ ಶೌಚಾಲಯವನ್ನು ಸುಸಜ್ಜಿತಗೊಳಿಸಲಾಗಿದೆ, ಮಾರ್ಕೆಟ್ ನ ಒಳಗೆ ಬೆಳಕಿನ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಇದೀಗ ಸಚಿವರ ಬಳಿ ಅವರ ಅಹವಾಲು ಸಲ್ಲಿಸಿದ್ದಾರೆ, ಒಟ್ಟಿನಲ್ಲಿ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಜಯ್ ಕುಮಾರ್, ಆರೋಗ್ಯ ನಿರೀಕ್ಷಕಿ ಸಂಧ್ಯಾ, ನಾಗಲಕ್ಷ್ಮಿ, ಬಾಬು ಇತರರು ಹಾಜರಿದ್ದರು.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page