ನ್ಯಾಯಾಧೀಶರಾದ ರೇಷ್ಮಾ ಕಲಕಪ್ಪ ಗೋಣಿ, ಗೌಡ ಜಗದೀಶ ರುದ್ರ ಅವರಿಗೆ ತಾಲೂಕು ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ 

by | 15/05/24 | ಕಾನೂನು

ಚಳ್ಳಕೆರೆ: ಪ್ರತಿಯೊಬ್ಬ ವ್ಯಕ್ತಿ ಜೀವನದಲ್ಲಿ ನೋವು ಅನುಭವಿಸಿ ನನಗೆ ಕಷ್ಟಗಳು ಎದುರಾದಾಗ ಮಾತ್ರ ನ್ಯಾಯ ಕೇಳಲು ನ್ಯಾಯಾಲಯಕ್ಕೆ ಹೋಗುತ್ತಾರೆ ವಕೀಲರುಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಕ್ಷಿದಾರರನ್ನು ಅಲೆದಾಡಿಸದೆ ತ್ವರಿತ ಗತಿಯಲ್ಲಿ ನ್ಯಾಯ ಕೊಡಿಸಿದಾಗ ನ್ಯಾಯಾಲಯದ ಬಗ್ಗೆ ಗೌರವ ಮೂಡಲು ಸಹಕಾರಿಯಾಗುತ್ತದೆ ಎಂದು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ರೇಷ್ಮಾ ಕಲಕೊಪ್ಪ ಗೋಣೆ ಅಭಿಪ್ರಾಯ ಪಟ್ಟರು. 


ನಗರದ ನ್ಯಾಯಾಲಯದ ಆವರಣದಲ್ಲಿ ವರ್ಗಾವಣೆ ಹಿನ್ನೆಲೆಯಲ್ಲಿ ತಮಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಚಳ್ಳಕೆರೆ ತಾಲೂಕು ಅತ್ಯಂತ ಹಿಂದುಳಿದ ತಾಲೂಕಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಜನರು ಹಾಗೂ ರೈತಾಪಿ ವರ್ಗ ಹೆಚ್ಚಿನದಾಗಿ ವಾಸ ಮಾಡುವ ಪ್ರದೇಶವಾಗಿದ್ದು ನೊಂದ ಜನರಿಗೆ ನ್ಯಾಯ ಕೊಡಿಸುವುದು ಪ್ರತಿಯೊಬ್ಬ ವಕೀಲರ ಕೆಲಸವಾಗಬೇಕು ಇಲ್ಲಿ ನಾನು ಕರ್ತವ್ಯ ನಿರ್ವಹಿಸಿರುವುದು ನನಗೆ ನೆಮ್ಮದಿ ನೀಡಿದೆ ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ನ್ಯಾಯಾಧೀಶರಾದ ನಾವು ತೀರ್ಪು ನೀಡುವುದಿಲ್ಲ ಇಲ್ಲಿ ಕೆಲಸ ಮಾಡಿದ್ದು ತುಂಬಾ ಸಂತೋಷದಾಯಕವಾಗಿದೆ ಎಲ್ಲಾ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಸಹಕಾರ ನೀಡಿರುವುದನ್ನು ನಾನು ಮರೆಯುವುದಿಲ್ಲ ಎಂದು ತಿಳಿಸಿದರು. 

ವರ್ಗಾವಣೆಗೊಂಡ ಮತ್ತೊಬ್ಬ ನ್ಯಾಯಾಧೀಶರಾದ ಗೌಡ ಜಗದೀಶ ರುದ್ರೆ ಮಾತನಾಡಿ ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ತನ್ನದೇ ಆದ ಘನತೆ ಗೌರವವಿದೆ ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕು ಎಂಬುದು ಪ್ರತಿಯೊಬ್ಬ ವಕೀಲರ ಹಾಗೂ ನ್ಯಾಯಾಧೀಶರ ಉದ್ದೇಶವಾಗಿರುತ್ತದೆ ಚಳ್ಳಕೆರೆ ತಾಲೂಕು ಬರಪೀಡಿತ ಪ್ರದೇಶವಾಗಿದ್ದರೂ ಸಹ ಉತ್ತಮ ರೀತಿಯಿಂದ ಸಾರ್ವಜನಿಕರು ಸ್ಪಂದಿಸುತ್ತಾರೆ ಎಲ್ಲ ವಕೀಲರು ನೊಂದು ಬರುವವರ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಪರಾಮರ್ಶಿಸಿ ನ್ಯಾಯ ದೊರಕಿಸಿಕೊಡಬೇಕು ನೂರು ಜನ ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂಬ ನ್ಯಾಯಾಂಗದ ಧ್ಯೇಯವನ್ನು ಎತ್ತಿ ಹಿಡಿಯುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು. 

ವಕೀಲರ ಸಂಘದ ಅಧ್ಯಕ್ಷ ಕೆ ಎಂ ನಾಗರಾಜ್ ಮಾತನಾಡಿ ನ್ಯಾಯಾಧೀಶರಾದ ಗೌಡ ಜಗದೀಶರುದ್ರೆ ಹಾಗೂ ರೇಷ್ಮಾ ಕಲಕಪ್ಪ ಗೋಣಿ ರವರು ನ್ಯಾಯಪರವಾದ ಉತ್ತಮ ತೀರ್ಪುಗಳನ್ನು ನೀಡಿ ವಕೀಲರ ಹಾಗೂ ಕಕ್ಷಿದಾರರ ಮನ ಗೆದ್ದಿದ್ದರು ನ್ಯಾಯ ಅದಲತ್ ಗಳ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಗೊಳಿಸಿ ಉತ್ತಮ ಸೇವೆ ಸಲ್ಲಿಸಿದರು ಎಂದು ಸ್ಮರಿಸಿದರು.

ಈ ವೇಳೆ ಅಪಾರ ಸಿವಿಲ್ ನ್ಯಾಯಾಧೀಶರಾದ ಹೆಚ್ ಆರ್ ಹೇಮಾ ಸೇರಿದಂತೆ ಹಲವು ವಕೀಲರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು. 

ಈ ಸಂದರ್ಭದಲ್ಲಿ ವಕೀಲರದ ಸಂಘದ ಉಪಾಧ್ಯಕ್ಷರಾದ ಬಿ.ಪಾಲಯ್ಯ ಕಾರ್ಯದರ್ಶಿ ಎಂ.ಎಸ್.ಸಿದ್ದರಾಜು, ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ಬೋರಯ್ಯ,ಶ್ರೀನಿವಾಸ್ ಟಿ‌.ತಮ್ಮಣ್ಣ, ಜಿ.ಶರಣಪ್ಪಯ್ಯ, ಜಿ.ಎಂ.ಆನಂದ ಎಂ.ಎಸ್.ಜಗದೀಶ ನಾಯಕ,ಕೆ.ಟಿ.ರುದ್ರೇಶ, ಮಧುಮತಿ, ಶಿಲ್ಪ,ಶ್ಯಾಮಲ,ಯು .ತಿಪ್ಪೇಸ್ವಾಮಿ ಪೆನ್ನಯ್ಯ  ಸಣ್ಣೋಬಯ್ಯ ,ರುದ್ರೇಶ,, ಹಿರಿಯ ವಕೀಲರಾದ  ದೊಡ್ಡ ರಂಗಪ್ಪ  ವಕೀಲರ ಸಂಘದ ಸದಸ್ಯರು ವಕೀಲರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page