ಚಳ್ಳಕೆರೆ ನ.23:
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತಶ್ರಾಯದಲ್ಲಿ ಇದೇ ನವೆಂಬರ್ 26ರಂದು ಸಂಜೆ 4ಕ್ಕೆ ಚಳ್ಳಕೆರೆ ತಾಲ್ಲೂಕಿನ ಬೊಂಬೇರಹಳ್ಳಿಯ ಬಯಲು ರಂಗಮಂದಿರದಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಟಿ.ರಘುಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು. ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಮ್ಮ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಚಳ್ಳಕೆರೆ ತಹಶೀಲ್ದಾರ ರೆಹಾನ್ ಷಾಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ದೇವರ ಮರಿಕುಂಟೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಜೆ.ಶಶಿಕಲಾ, ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದುರ್ಗಮ್ಮ ಹನುಮಂತಪ್ಪ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪಿ.ತಿಪ್ಪೇಸ್ವಾಮಿ, ಬೊಂಬೇರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಮ್ಮ ಡಿ ಹುಚ್ಚಪ್ಪ, ಟಿ.ಲೋಕೇಶಪ್ಪ, ಎಲ್.ವಿಶ್ವನಾಥ ಭಾಗವಹಿಸುವರು. ಸಾಹಿತಿ ಬಿ.ತಿಪ್ಪಣ್ಣ ಮರಿಕುಂಟೆ ಅವರು ವಿಶೇಷ ಉಪನ್ಯಾಸ ನೀಡುವರು.
ಗಿರಿಜನ ಉತ್ಸವದಲ್ಲಿ ಕರ್ನಾಟಕ ಸಂಗೀತ, ಸುಗಮ ಸಂಗೀತ, ಕನ್ನಡ ಗೀತೆ ಗಾಯನ, ಜಾನಪದ ಸಂಗೀತ, ಜಾನಪದ ಗೀತೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕೋಳಿ ಕುಣಿತ, ನಾಸಿಕ್ ಡೋಲು, ನಂದಿ ಧ್ವಜ, ಗಾರುಡಿ ಗೊಂಬೆ, ಖಾಸಬೇಡರ ಪಡೆ, ತ್ರಾಷ ವಾದ್ಯ ಪ್ರದರ್ಶನ ನಡೆಯಲಿದೆ.
ಗಿರಿಜನ ಉತ್ಸವ ಮೆರವಣಿಗೆಯು ಅಂದು ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಿಂದ ಜಾನಪದ ಕಲಾತಂಡಗಳೊಂದಿಗೆ ಬಯಲು ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments