ನ.4 ಹಾಗೂ 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ: ಅಕ್ರಮ ತಡೆಯಲು ಜಾಮರ್ ಹಾಗೂ ಸಿಸಿಟಿವಿ ಅಳವಡಿಸಿ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

by | 02/11/23 | ಸುದ್ದಿ

ಚಿತ್ರದುರ್ಗ ನ.02:
ಇದೇ ನವೆಂಬರ್ 4 ಮತ್ತು 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಮೊಬೈಲ್, ಬ್ಲೂಟೂತ್ ಇತರೆ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಮೊಬೈಲ್ ಜಾಮರ್ ಹಾಗೂ ಸಿ.ಸಿ.ಟಿ.ವಿ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಕೆಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಗುರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರೂಪ್-ಸಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನ. 04 ರಂದು ಮಧ್ಯಾಹ್ನ 02 ರಿಂದ 04 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ. ನ. 05 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ, ಹಾಗೂ ಇದೇ ದಿನ ಮಧ್ಯಾಹ್ನ 02 ರಿಂದ 04 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಗಟ್ಟಲು ಕೆ.ಪಿ.ಎಸ್.ಸಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಕೊಠಡಿಗಳಲ್ಲಿ ಪ್ರತಿಯೊಬ್ಬರ ಮೇಲೆ ನಿಗಾ ವಹಿಸಲು ಕೊಠಡಿ ಮೇಲ್ವಿಚಾರಕರಿಗೆ ಬಾಡಿಕ್ಯಾಮರಾ ಧರಿಸುವ ವ್ಯವಸ್ಥೆ ಮಾಡಿದೆ. ಪರಿಕ್ಷಾ ಕೇಂದ್ರ ಮೇಲ್ವಿಚಾರಕರು ಜಾಮರ್, ಸಿಸಿಟಿವಿ ಹಾಗೂ ಕ್ಯಾಮರಾಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೆ.ಪಿ.ಎಸ್.ಸಿ ಅಧಿಕಾರಿಗಳಿಗೆ ತಿಳಿಸಬೇಕು. ಯಾವುದೇ ಅಕ್ರಮಗಳು ಜರುಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ನಗರದ ಬಾಲಕರ ಸ.ಪ.ಪೂ. ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಕಾಲೇಜು ಕೇಂದ್ರಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯಲಿದೆ. ಒಟ್ಟು 1828 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರ ಸುತ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಕಲಂ. 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ತೆರದು ಆರೋಗ್ಯ ಸಹಾಯಕರನ್ನು ನೇಮಿಸಬೇಕು. ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಜಿಲ್ಲಾ ಖಜಾನಾಧಿಕಾರಿ ರಮೇಶ್ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page