ಪಡಿತರ ಅಕ್ಕಿ ಪಡೆಯಲು ಬಂಜಗೆರೆ ಗ್ರಾಮದಲ್ಲಿ ರಾತ್ರಿ ಕತ್ತಲಲ್ಲಿ ನೂಕು ನುಗ್ಗಲು..

by | 13/12/23 | ತನಿಖೆ ವರದಿ


ಚಳ್ಳಕೆರೆ ಡಿ.13 ಪಡಿತರ ಅಕ್ಕಿ ಪಡೆಯಲು ಮಹಿಳೆಯರು ರಾತ್ರಿ ಕತ್ತಲಲ್ಲಿ ಸರತಿ ಸಾಲಿನಲ್ಲಿ ನಿಂತು ಅಕ್ಕಿ ಪಡೆಯುವಂತಾಗಿದೆ. ಅನಿವಾರ್ಯಕೂಲಿ ಕೆಲಸ ಬಿಟ್ಟು ಮೂರು ದಿನ ಕಾಯ್ದರೂ ಅಕ್ಕಿಯೂ ಇಲ್ಲ ಕೂಲಿಯೂ ಇಲ್ಲ ಎಂದು‌ ಅಧಿಕಾರಿಗಳ ವಿರುದ್ದ ಹಿಡಿಶಾಪ ಹಾಕುತ್ತೊರುವ ವೃದ್ಧ ಪಡಿತರ ಮಹಿಳೆಯರು.

ಹೌದು ಇದು ಚಳ್ಳಕೆರೆ ತಾಲೂಕಿನ‌ ಬಂಜಗೆರೆ ಗ್ರಾಮದಲ್ಲಿ ಪ್ರತಿ ನಿತ್ಯ ಅನ್ನ ಭಾಗ್ಯ ಯೋಜನೆಯ ಪಡಿತರ ಅಕ್ಕಿ ಪಡೆಯಲು ವೃದ್ದರು.ಮಹಿಳೆಯರು ರಾತ್ರಿವೇಳೆ ಅಕ್ಕಿಗಾಗಿ ಕಾದು ಕುಳಿತು ಪಡೆಯುತ್ತಾರೆ. ಮೊದಲು ಹೋದವರಿಗೆ ಅಕ್ಕಿ ಮೈ ಮರೆತು ತಡವಾಗಿ ಹೋದರೆ ಪಡಿರ ಸಿಗುವುದಿಲ್ಲ ಎಂಬುದು ಇತ್ತೀಚೆಗೆ ತಾಲೂಕಿನ ಅನೇಕ ಪಡಿತರ ವಿತರಣೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಫಲಾನುಭವಿಗಳಂದ ಎಬ್ಬೆಟ್ಟಿನ ಗುರುತು ಪಡೆದು ಅಕ್ಕಿ ಕಡಿಮೆ ಬಂದಿದೆ ತಂದ ನಂತರ ಕೊಡುತ್ತೇವೆ ಎಂಬ ಉತ್ತರದಿಂದ ಬೇಸತ್ತ ಪಡಿತರ. ಚೀಟಿದಾರರು ಹಗಲು ರಾತ್ರಿ ಎನ್ನದೆ ಕಾದು ಕುಳಿತು ಅಕ್ಕಿ ಪಡೆತಲು ಮುಂದಾಗುತ್ತಾರೆ. ನ್ಯಾಯಬೆಲೆ ಅಂಗಡಿ ಮಾಲಿಕರಿಗೆ ಹಾಗೂ ಅಧಿಕಾರಿಗಳಿಗೆ ಬೈಯ್ದುಕೊಳ್ಳುತ್ತಿರುವ ದೃಶ್ಯ ಕಂಡು ಬಂರುತ್ತದೆ.

*ಅಕ್ಕಿ ಕಳವು ಪತ್ತೆ.* ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ಅಕ್ಕಿ ನೀಡುತ್ತಿರುವ ಅಕ್ಕಿಯನ್ನು
ಚಿತ್ರದುರ್ಗದ ಕೆಳಗೋಟೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರು ಅಕ್ರಮವಾಗಿ ಹತ್ತು ಚೀಲ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಮಾಲು ಸಮೇತ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ನ್ಯಾಯಬೆಲೆ ಅಂಗಡಿ ಮಾಲಿಕರು ಹೇಳುವುದೇ ಬೇರೆ ಮೊದಲು ಒಂದು ಚೀಲಕ್ಕೆ 20 ಕೆ.ಜಿ.ಅಕ್ಕಿ ಕೊಡುತ್ತಿದ್ದರು ಈಗ ಅರ್ಧ ಕೆ.ಜಿ ಅಕ್ಕಿ ಖಾಲಿ ಚೀಲದ ಲೆಕ್ಕದಲ್ಲಿ ಕೊಡುತ್ತಾರೆ ಇದರಿಂದ ಪಡಿತರದಾರರಿಗೆ ಅಕ್ಕಿ ಕಡಿಮೆ ಬರುತ್ತವೆ ಎಂಬ ಉತ್ತರ ಹೇಳುತ್ತಾರೆ. ಒಟ್ಟಾರೆ ಬಡವರಿಗೆ ವಿತರಣೆ ಮಾಡುವ ಅನ್ನ ಭಾಗ್ಯ ಯೋಜನೆ ಅನ್ಯರ ಪಾಲಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಅನ್ನಭಾಗ್ಯ ಪಡಿತರ ಅಕ್ಕಿ ವಿತರಣೆಯ ಲೋಪವನ್ನು ಸರಿಪಡಿಸುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page