ಪಡಿಪೂಜೆ ಅಂಗವಾಗಿ ಹರಿಹರಸುತ ಐಯ್ಯಪ್ಪ ಸೇವಾ ಸಮಿತಿಯಿಂದ ದೇವರ ಎತ್ತುಗಳಿಗೆ ಉಚಿತ ಮೇವು ವಿತರಣೆ..

by | 23/12/23 | ಜನಧ್ವನಿ


ಚಳ್ಳಕೆರೆ ಡಿ.23 ಸಕಾಲಕ್ಕೆ ಮಳೆ ಬೆಳೆಯಿಲ್ಲದೆ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿದಲು ದೇವರ ಎತ್ತುಗಳಿಗೆ 60 ಸಾವಿರ ಮೌಲ್ಯದ ಮೇವು ಹರಿಹರ ಸೇವಾ ಸಮಿತಿವತಿ ಸದಸ್ಯ ಕೀರ್ತಿಪ್ರಸಾದ್ ಹೇಳಿದರು.

ಚಳ್ಳಕೆರೆ ನಗರದಲ್ಲಿ ಇದೇ ಪ್ರಥಮ ಬಾರಿಗೆ ಶಬರಿಮಲೆ ಸನ್ನಿಧಾನದ ಶೈಲಿಯಲ್ಲಿರುವ ಪ್ರತಿರೂಪದ ಮಂಪಟವನ್ನು ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ನಿರ್ಮಿಸಿ ಗೋಪೂಜೆ ನೆರವೇರಿಸಿ ದೇವರ ಎತ್ತುಗಳಿಗೆ ಮೂರು ಲೋಡ್ ಮೇವು ಕಳಿಸಲಾಯಿತು . ಶನಿವಾರ ದಿಂದ ಮೂರು ದಿನಗಳ ಕಾಲ ವಿಶೇಷವಾಗಿ ಅಯ್ಯಪ್ಪ ಪೂಜೆ ಮತ್ತು ಪಡಿಪೂಜಾ ಮಹೋತ್ಸವವನ್ನು ಇಲ್ಲಿನ ಹರಿಹರಸುತ ಸೇವಾ ಸಮಿತಿಯಿಂದ ಆಚರಿಸಲಾಗುತ್ತಿದೆ.

ನಗರದಲ್ಲಿ3 ದಿನಗಳ ಕಾಲ ಅಯ್ಯಪ್ಪಸ್ವಾಮಿಯ ಹತ್ತಾರು ವಿಶೇಷ ಪೂಜಾ ಕಾರ್ಯಕ್ರಮ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಶಬರಿಮಲೆ ಸನ್ನಿಧನದ ಮಣಿ ಮಂಟಪದ ಅರ್ಚಕ ಅಜಿತ್ ಜನಾರ್ಧನ ಕುರುಪ್ ಹಾಗೂ ಶಬರಿಮಲೆಯ 18 ಮೆಟ್ಟಿಲುಗಳ ಮತ್ತು ತಿರುವಾಭರಣ ಪೆಟ್ಟಿಗೆಗಳ ಶಿಲ್ಪಿ ಸ್ತಪತಿ ಎಂ.ದೊರೈಬಾಬು ಆಗಮಿಸಲಿದ್ದಾರೆ.ಇತ್ತ ಶಬರಿಮಲೆ ಅರ್ಚಕ ಆನಂದನಂಬೂರಿ ಸಮ್ಮುಖದಲ್ಲಿ ಅವರ ತಂಡ ಹಲವು ಪೂಜಾ ಕಾರ್ಯಗಳ ಜತೆಗೆ ಕೇಳರದ ಸಾಂಪ್ರದಾಯಿಕ ಚಂಡೆಮೇಳದೊಂದಿಗೆ ವಿಶೇಷ ಭಗವತಿ ಸೇವೆ ನಡೆಸಿ ಕೊಡುತ್ತಿರುವುದು ವಿಶೇಷ ಎನ್ನುತ್ತಾರೆ ಹರಿಹರಸುತ ಸೇವಾ ಸಮಿತಿ ಭಕ್ತ ಕೀರ್ತಿ ಪ್ರಸಾದ್.


ಶನಿವಾರ ಮುಂಜಾನೆಯಿಂದ ಗಣಹೋಮದೊಂದಿಗೆ ಪೂಜಾ ಕಾರ್ಯ ಆರಂಭಿಸಿ ದತ್ತಾತ್ರೇಯಸ್ವಾಮಿ ದೇವಾಲಯದಿಂದ ಅಯ್ಯಪ್ಪಸ್ವಾಮಿ ವಿಗ್ರಹವನ್ನು ಮೆರವಣಿಗೆಯ ಮೂಲಕ ಗಾಯತ್ರಿ ಕಲ್ಯಾಣ ಮಂಪಟದ ಆವರಣದಲ್ಲಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಮಂಟಪದಲ್ಲಿ ಪ್ರತಿಷ್ಠಾಪಿಸುವುದರೊಂದಿಗೆ ಪಡಿಪೂಜಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಇತ್ತ ಶಬರಿಮಲೆ ಪ್ರತಿರೂಪದಂತೆ ನಿರ್ಮಿಸಿ ಪ್ರತಿಷ್ಠಾಪಿಸಿರುವ ಮಂಪಟದಲ್ಲಿ ಭಕ್ತರು ದರ್ಶನ ಪಡೆದುಕೊಂಡು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ವಿಶೇಷ ಪೂಜಾ ಕಾರ್ಯದಲ್ಲಿ ನಡೆಸಲಾಗುತ್ತಿದೆ. ಭಕ್ತರು ಅಯ್ಯಪ್ಪನ ದರ್ಶನ ಮಾಡಿಕೊಂಡು ಇಂದಿನಿಂದ ಮೂರು ದಿನಗಳ ಕಾಲ ಪ್ರಸಾದ ಸ್ವೀಕರಿಸಿಕೊಂಡು ಹೋಗುವಂತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಅಯ್ಯಪ್ಪನ ಹತ್ತಾರು ಪೂಜಾ ಕೈಂಕಾರ್ಯಗಳ ನಡುವೆ ಸಮಿತಿಯು ದೇವರ ಎತ್ತುಗಳಿಗೆ 3 ಲೋಡ್ ಮೇವು ವಿತರಣೆ ಮತ್ತು ಸರಕಾರಿ ಶಾಲೆಯ 108 ವಿದ್ಯಾರ್ಥಿಗಳಿಗೆ ಬ್ಯಾಗ್,ಪುಸ್ತಕಗಳು ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಿದ್ದಾರೆ.
ಸನ್ನಿಧಿ ಯಲ್ಲಿ ಗಣಹೋಮ, ಉಷಾಪೂಜೆ, ತುಪ್ಪಾಭಿಷೇಕ ಮತ್ತು ಅಷ್ಟಾಭಿಷೇಕ,ಉದಯಾಸ್ತಮಾನ ಪೂಜೆ, ಗೋಪೂಜೆ ದೇವರ ಎತ್ತುಗಳಿಗೆ ಮೇವು ವಿತರಣೆ, ಉಚ್ಚಪೂಜೆ ಪುಷ್ಟಾಭಿಷೇಕ, ಪಡಿ ಪ್ರತಿಷ್ಠಾ ಪೂಜೆ, ವಿಶೇಷ ಅಯ್ಯಪ್ಪಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಹರಿವರಾಸನಂ, ವಿಶೇಷ ಭಗವತಿ ಸೇವೆ ಮತ್ತು ತುಮಕೂರು ಜಿಲ್ಲೆಯ ನೀಲಕಂಠೇಶ್ವರಸ್ವಾಮಿ ಅಯ್ಯಪ್ಪ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ.ಪೂಜಾ ಕಾರ್ಯಕ್ರಮದಲ್ಲಿ ಕಂಚಿ ಮಂಜುನಾಥ್,ಬಾಬುಗುರುಸ್ವಾಮಿ, ಅನಿಲ್.ಆನಂದ್ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page