ಪಡಿಪೂಜೆ ಅಂಗವಾಗಿ ಹರಿಹರಸುತ ಐಯ್ಯಪ್ಪ ಸೇವಾ ಸಮಿತಿಯಿಂದ ದೇವರ ಎತ್ತುಗಳಿಗೆ ಉಚಿತ ಮೇವು ವಿತರಣೆ..

by | 23/12/23 | ಜನಧ್ವನಿ


ಚಳ್ಳಕೆರೆ ಡಿ.23 ಸಕಾಲಕ್ಕೆ ಮಳೆ ಬೆಳೆಯಿಲ್ಲದೆ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿದಲು ದೇವರ ಎತ್ತುಗಳಿಗೆ 60 ಸಾವಿರ ಮೌಲ್ಯದ ಮೇವು ಹರಿಹರ ಸೇವಾ ಸಮಿತಿವತಿ ಸದಸ್ಯ ಕೀರ್ತಿಪ್ರಸಾದ್ ಹೇಳಿದರು.

ಚಳ್ಳಕೆರೆ ನಗರದಲ್ಲಿ ಇದೇ ಪ್ರಥಮ ಬಾರಿಗೆ ಶಬರಿಮಲೆ ಸನ್ನಿಧಾನದ ಶೈಲಿಯಲ್ಲಿರುವ ಪ್ರತಿರೂಪದ ಮಂಪಟವನ್ನು ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿ ನಿರ್ಮಿಸಿ ಗೋಪೂಜೆ ನೆರವೇರಿಸಿ ದೇವರ ಎತ್ತುಗಳಿಗೆ ಮೂರು ಲೋಡ್ ಮೇವು ಕಳಿಸಲಾಯಿತು . ಶನಿವಾರ ದಿಂದ ಮೂರು ದಿನಗಳ ಕಾಲ ವಿಶೇಷವಾಗಿ ಅಯ್ಯಪ್ಪ ಪೂಜೆ ಮತ್ತು ಪಡಿಪೂಜಾ ಮಹೋತ್ಸವವನ್ನು ಇಲ್ಲಿನ ಹರಿಹರಸುತ ಸೇವಾ ಸಮಿತಿಯಿಂದ ಆಚರಿಸಲಾಗುತ್ತಿದೆ.

ನಗರದಲ್ಲಿ3 ದಿನಗಳ ಕಾಲ ಅಯ್ಯಪ್ಪಸ್ವಾಮಿಯ ಹತ್ತಾರು ವಿಶೇಷ ಪೂಜಾ ಕಾರ್ಯಕ್ರಮ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಶಬರಿಮಲೆ ಸನ್ನಿಧನದ ಮಣಿ ಮಂಟಪದ ಅರ್ಚಕ ಅಜಿತ್ ಜನಾರ್ಧನ ಕುರುಪ್ ಹಾಗೂ ಶಬರಿಮಲೆಯ 18 ಮೆಟ್ಟಿಲುಗಳ ಮತ್ತು ತಿರುವಾಭರಣ ಪೆಟ್ಟಿಗೆಗಳ ಶಿಲ್ಪಿ ಸ್ತಪತಿ ಎಂ.ದೊರೈಬಾಬು ಆಗಮಿಸಲಿದ್ದಾರೆ.ಇತ್ತ ಶಬರಿಮಲೆ ಅರ್ಚಕ ಆನಂದನಂಬೂರಿ ಸಮ್ಮುಖದಲ್ಲಿ ಅವರ ತಂಡ ಹಲವು ಪೂಜಾ ಕಾರ್ಯಗಳ ಜತೆಗೆ ಕೇಳರದ ಸಾಂಪ್ರದಾಯಿಕ ಚಂಡೆಮೇಳದೊಂದಿಗೆ ವಿಶೇಷ ಭಗವತಿ ಸೇವೆ ನಡೆಸಿ ಕೊಡುತ್ತಿರುವುದು ವಿಶೇಷ ಎನ್ನುತ್ತಾರೆ ಹರಿಹರಸುತ ಸೇವಾ ಸಮಿತಿ ಭಕ್ತ ಕೀರ್ತಿ ಪ್ರಸಾದ್.


ಶನಿವಾರ ಮುಂಜಾನೆಯಿಂದ ಗಣಹೋಮದೊಂದಿಗೆ ಪೂಜಾ ಕಾರ್ಯ ಆರಂಭಿಸಿ ದತ್ತಾತ್ರೇಯಸ್ವಾಮಿ ದೇವಾಲಯದಿಂದ ಅಯ್ಯಪ್ಪಸ್ವಾಮಿ ವಿಗ್ರಹವನ್ನು ಮೆರವಣಿಗೆಯ ಮೂಲಕ ಗಾಯತ್ರಿ ಕಲ್ಯಾಣ ಮಂಪಟದ ಆವರಣದಲ್ಲಿ ನಿರ್ಮಿಸಿರುವ ಅಯ್ಯಪ್ಪಸ್ವಾಮಿ ಮಂಟಪದಲ್ಲಿ ಪ್ರತಿಷ್ಠಾಪಿಸುವುದರೊಂದಿಗೆ ಪಡಿಪೂಜಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಇತ್ತ ಶಬರಿಮಲೆ ಪ್ರತಿರೂಪದಂತೆ ನಿರ್ಮಿಸಿ ಪ್ರತಿಷ್ಠಾಪಿಸಿರುವ ಮಂಪಟದಲ್ಲಿ ಭಕ್ತರು ದರ್ಶನ ಪಡೆದುಕೊಂಡು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ವಿಶೇಷ ಪೂಜಾ ಕಾರ್ಯದಲ್ಲಿ ನಡೆಸಲಾಗುತ್ತಿದೆ. ಭಕ್ತರು ಅಯ್ಯಪ್ಪನ ದರ್ಶನ ಮಾಡಿಕೊಂಡು ಇಂದಿನಿಂದ ಮೂರು ದಿನಗಳ ಕಾಲ ಪ್ರಸಾದ ಸ್ವೀಕರಿಸಿಕೊಂಡು ಹೋಗುವಂತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಅಯ್ಯಪ್ಪನ ಹತ್ತಾರು ಪೂಜಾ ಕೈಂಕಾರ್ಯಗಳ ನಡುವೆ ಸಮಿತಿಯು ದೇವರ ಎತ್ತುಗಳಿಗೆ 3 ಲೋಡ್ ಮೇವು ವಿತರಣೆ ಮತ್ತು ಸರಕಾರಿ ಶಾಲೆಯ 108 ವಿದ್ಯಾರ್ಥಿಗಳಿಗೆ ಬ್ಯಾಗ್,ಪುಸ್ತಕಗಳು ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಿದ್ದಾರೆ.
ಸನ್ನಿಧಿ ಯಲ್ಲಿ ಗಣಹೋಮ, ಉಷಾಪೂಜೆ, ತುಪ್ಪಾಭಿಷೇಕ ಮತ್ತು ಅಷ್ಟಾಭಿಷೇಕ,ಉದಯಾಸ್ತಮಾನ ಪೂಜೆ, ಗೋಪೂಜೆ ದೇವರ ಎತ್ತುಗಳಿಗೆ ಮೇವು ವಿತರಣೆ, ಉಚ್ಚಪೂಜೆ ಪುಷ್ಟಾಭಿಷೇಕ, ಪಡಿ ಪ್ರತಿಷ್ಠಾ ಪೂಜೆ, ವಿಶೇಷ ಅಯ್ಯಪ್ಪಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಹರಿವರಾಸನಂ, ವಿಶೇಷ ಭಗವತಿ ಸೇವೆ ಮತ್ತು ತುಮಕೂರು ಜಿಲ್ಲೆಯ ನೀಲಕಂಠೇಶ್ವರಸ್ವಾಮಿ ಅಯ್ಯಪ್ಪ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ.ಪೂಜಾ ಕಾರ್ಯಕ್ರಮದಲ್ಲಿ ಕಂಚಿ ಮಂಜುನಾಥ್,ಬಾಬುಗುರುಸ್ವಾಮಿ, ಅನಿಲ್.ಆನಂದ್ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page