ಹಿರಿಯೂರು :
ಕರ್ನಾಟಕ ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಹೆಚ್ಚು ಜನ ಪತ್ರಕರ್ತರು ಈ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಪತ್ರಕರ್ತರ ಕೆಲಸ ಅಂದರೆ ಅದು ಅಷ್ಟು ಸುಲಭದ ಕೆಲಸವಲ್ಲ, ಈ ಎಲ್ಲಾ ಪತ್ರಕರ್ತರುಗಳು ಪ್ರತಿದಿನ ಅತ್ಯಂತ ಭಯದಿಂದಲೇ ಕೆಲಸ ಮಾಡುತ್ತಿದ್ದಾರೆ, ಇಂತಹ ಪತ್ರಕರ್ತರುಗಳಿಗೆ ಅಗತ್ಯ ಭದ್ರತೆ ಹಾಗೂ ಸೂಕ್ತ ರಕ್ಷಣೆ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂಬುದಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಗೋಪಾಲಗೌಡ ಹೇಳಿದರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಇವರ ನೇತೃತ್ವದಲ್ಲಿ ಮೊದಲವರ್ಷದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರ್ಯವಾದ ನ್ಯಾಯಾಂಗದ ಕಾರ್ಯವನ್ನು ಇಡೀ ಜಗತ್ತು ವೀಕ್ಷಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ಪತ್ರಿಕಾ ರಂಗಕ್ಕೆ ಎಷ್ಟು ಗಣನೀಯ ಸ್ಥಾನಮಾನ ನೀಡಿದೆ ಎಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಡವಿದಾಗ ಈ ಸರ್ಕಾರಗಳನ್ನು ಎಚ್ಚರಿಸುವ ಹಾಗೂ ರಚನಾತ್ಮಕ ಟೀಕೆ ಟಿಪ್ಪಣಿಗಳ ಮೂಲಕ ಸರಿದಾರಿಗೆ ತರುವ ಅವಿಭಾಜ್ಯ ಹಕ್ಕು ಪತ್ರಕರ್ತರಿಗೆ ಇದೆ ಎಂಬುದನ್ನು ಸರ್ವೋಚ್ಛ ನ್ಯಾಯಾಲಯ ಸಮರ್ಥಿಸುತ್ತದೆ ಎಂಬುದಾಗಿ ಹೇಳಿದರು.
ಈ ದೇಶಕ್ಕೆ ಸ್ವಾತಂತ್ರ್ಯ ಬಂದು ಸುಮಾರು 75 ವರ್ಷಗಳ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಕರ್ತರ ಸಂಕಷ್ಟಗಳನ್ನು ಯಾವ ಸರ್ಕಾರಗಳು ಪತ್ರಕರ್ತರರನ್ನು ಕರೆದು ಚರ್ಚಿಸಿಲ್ಲ, ಅಲ್ಲದೆ ನಿಮ್ಮಿಂದ ಪತ್ರಿಕೆಗಳಲ್ಲಿ ಬರೆಸಿಕೊಳ್ಳುವ ಯಾವ ಶಾಸಕರು, ಮಂತ್ರಿಗಳು ನಿಮ್ಮ ಸಮಸ್ಯೆಗಳ ಬಗ್ಗೆ ಶಾಸನಸಭೆಗಳಲ್ಲಿ ಸಹ ಧ್ವನಿ ಎತ್ತಿಲ್ಲಾ, ಅಷ್ಟೇಅಲ್ಲಾ, ಇತ್ತೀಚೆಗೆ ಕರ್ನಾಟಕ ಸರ್ಕಾರದ ಬಜೆಟ್ ಮಂಡನೆಯಲ್ಲಿ ಕರ್ನಾಟಕ ಸರ್ಕಾರ ಪತ್ರಕರ್ತರಿಗಾಗಿ ಯಾವುದೇ ರೀತಿಯ ಹಣ ಮೀಸಲಿರಿಸಿಲ್ಲ, ಇದು ನಿಜಕ್ಕೂ ವಿಷಾದನೀಯ ಎಂದರು.
ಆದರೆ ಕರ್ನಾಟಕ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯ ಕ್ಷರಾದ ಬಂಗ್ಲೇ ಮಲ್ಲಿಕಾರ್ಜುನ್ ರವರು ಈ ಸಂಘಟನೆಯನ್ನು ಸ್ಥಾಪಿಸುವ ಮೂಲಕ ನಿಮ್ಮೆಲ್ಲರನ್ನು ಒಂದೆಡೆ ಕ್ರೋಢೀಕರಿಸಿ, ಪತ್ರಕರ್ತರ ಸಂಕಷ್ಟ ಹಾಗೂ ಸಮಸ್ಯೆಗಳನ್ನು ಚರ್ಚಿಸಲು ಈ ಸಮ್ಮೇಳನ ಹಮ್ಮಿಕೊಂಡಿದ್ದು, ಹದಗೆಟ್ಟು ಹೋಗುತ್ತಿರುವ ಸಾಮಾಜಿಕ ವ್ಯವಸ್ಥೆಯನ್ನು, ಸ್ಪಲ್ಪಮಟ್ಟಿಗೆ ಹತೋಟಿಗೆ ತರುವಂತ ಪ್ರಾಮಾಣಿಕಪ್ರಯತ್ನ ಈ ಸಮ್ಮೇಳನದ್ದಾಗಿದೆ ಎಂಬುದಾಗಿ ಅವರು ಹೇಳಿದರು.
ಪೂಜ್ಯರಾದ ಆನಂದ ಗುರೂಜಿ ಮಾತನಾಡಿ, ಸಮಾಜದ ಜ್ವಲಂತ ಸಮಸ್ಯೆಗಳು, ಜನರ ನೋವು ನಲಿವುಗಳನ್ನು ನಮ್ಮನ್ನಾಳುವ ಸರ್ಕಾರಗಳಿಗೆ, ಜನಪ್ರತಿನಿಧಿಗಳಿಗೆ ಎತ್ತಿ ತೋರಿಸುವ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ, ಅಂತಹ ಪತ್ರಿಕಾಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಗುರುತಿಸಿ, ಸನ್ಮಾನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಹೇಳಿದರು.
ಟಿವಿ-5 ಮುಖ್ಯಸ್ಥರಾದ ರಮಾಕಾಂತ್ ಮಾತನಾಡಿ, ಸಮಾಜದ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ನಾಲ್ಕನೇ ಅಂಗವಾದ ಪತ್ರಿಕಾರಂಗದಲ್ಲಿ ಪತ್ರಕರ್ತರು ಸಮಾಜದಲ್ಲಿ ದಿನನಿತ್ಯ ನಡೆಯುವ ಹಲವಾರು ಹಗರಣಗಳನ್ನು ಹೊರತರಲು ತಮ್ಮ ಪ್ರಾಣದ ಹಂಗನ್ನು ತೊರೆದು ಮಾಹಿತಿಯನ್ನು ಸಂಗ್ರಹಿಸುವ ಕೆಲಸ ಮಾಡುತ್ತಾರೆ, ಈ ನಿಟ್ಟಿನಲ್ಲಿ ಅನೇಕ ಬಾರಿ ಜನಪ್ರತಿನಿಧಿಗಳು, ಪ್ರಭಾವಿಗಳು, ಅಧಿಕಾರಿಗಳನ್ನು ಎದುರು ಹಾಕಿಕೊಳ್ಳಬೇಕಾಗಿರುತ್ತದೆ, ಇಂತಹ ಪತ್ರಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪತ್ರಕರ್ತರಿಗೆ ನೆರವು ನೀಡಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷ ಬಂಗ್ಲೇ ಮಲ್ಲಿಕಾರ್ಜುನ್, ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿಯತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments