ಪತ್ರಕರ್ತರ ಹಾಗೂ ದೃಶ್ಯ ಮಾಧ್ಯಮದವರ ಪರ ಧ್ವನಿ ಎತ್ತಿದ ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ

by | 09/12/23 | ಮಾತೆಂದರೆ ಇದು


ಬೆಳಗಾವಿ
ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರಿಗೆ ರಕ್ಷಣಾ ಕಾಯ್ದೆ ಜಾರಿಗೊಳಿಸಿ ಜೀವ ವಿಮಾ ಸೌಲಭ್ಯ ಕಲ್ಪಿಸಿ, ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಸದಸ್ಯರಾದ ಚಿದಾನಂದ ಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಬುಧವಾರದಂದು ಸದನದ ಶೂನ್ಯ ವೇಳೆಯಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಅವರು ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರ ಪರವಾಗಿ ಧ್ವನಿ ಎತ್ತಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗಕ್ಕೆ ವಿಶೇಷ ಸ್ಥಾನವಿದೆ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು ವ್ಯವಸ್ಥೆಯ ವೈಫಲ್ಯಗಳನ್ನು ಒಳಿತನ್ನು ಜನತೆಯ ಮುಂದೆ ಇಡುವಲ್ಲಿ ಪತ್ರಿಕಾ ರಂಗ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ವಾಸ್ತವವನ್ನು ಜನತೆಗೆ ಮುಂದಿಡುವ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ಹಾಗೂ ದೃಶ್ಯ ಮಾಧ್ಯಮ ವರದಿಗಾರರಿಗೆ ಜೀವಕ್ಕೆ ಆಪತ್ತು ತರುವ ಸನ್ನಿವೇಶಗಳು ನಡೆಯುತ್ತಿರುತ್ತವೆ.
ಸರಕಾರ ಹಾಗೂ ಸಾರ್ವಜನಿಕರ ಮಧ್ಯ ಸಂಪರ್ಕ ಸೇತುವೆಯಾಗಿ ಪ್ರಾಣದ ಹಂಗನ್ನು ತೊರೆದು ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಪತ್ರಿಕಾ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ವೃತ್ತಿ ಬದುಕಿನಲ್ಲಿ ಯಾವುದೇ ರೀತಿಯ ರಕ್ಷಣೆ ಇಲ್ಲದಂತಾಗಿದೆ ಇದರಿಂದಾಗಿ ಸಮಾಜದಲ್ಲಿನ ವಾಸ್ತವ ಪರಿಸ್ಥಿತಿಯನ್ನು ವರದಿ ಮಾಡಲು ಪತ್ರಕರ್ತರು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಆದ್ದರಿಂದ ಕೂಡಲೇ ರಾಜ್ಯದ ಸಮಸ್ತ ಪತ್ರಕರ್ತ ಹಾಗೂ ದೃಶ್ಯ ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಿ ಪ್ರತಿಯೊಬ್ಬ ವರದಿಗಾರರಿಗೂ ಜೀವ ವಿಮಾ ಸೌಲಭ್ಯ ಕಲ್ಪಿಸಿ ರಾಜ್ಯಾದ್ಯಂತ ಸಂಚರಿಸಲು ಉಚಿತ ಬಸ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಪತ್ರಕರ್ತರು ಹಾಗೂ ದೃಶ್ಯಮಾಧ್ಯಮ ಪ್ರತಿನಿಧಿಗಳಿಗೆ ನ್ಯಾಯ ಒದಗಿಸಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page