ಚಿತ್ರದುರ್ಗ ಡಿ.22: ದಿನಪತ್ರಿಕೆಗಳನ್ನು ವಿತರಿಸುವ ಪತ್ರಿಕಾ ವಿತರಕರಿಗೆ ರಾಜ್ಯ ಸರ್ಕಾರ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆ ಜಾರಿ ಮಾಡಿದೆ. ಕರ್ನಾಟಕದಲ್ಲಿ ನಿವಾಸಿಯಾಗಿರುವ 16 ರಿಂದ 59 ವರ್ಷದೊಳಿಗಿನ ಪತ್ರಿಕಾ ವಿತರಕರು ಇ-ಶ್ರಮ ಪೋರ್ಟ್ಲ್ www.eshram.gov.in ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಆದಾಯ ತೆರಿಗೆ ಪಾವತಿಸುವವರು ಹಾಗೂ ಇ.ಎಸ್.ಐ ಫಲಾನುಭವಿಗಳಿಗೆ ಯೋಜನೆ ಅನ್ವಯಿಸುವುದಿಲ್ಲ. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ.2 ಲಕ್ಷ. ಅಪಘಾತದಿಂದ ಸಂಪೂರ್ಣವಾಗಿ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಗರಿಷ್ಠ ರೂ.2 ಲಕ್ಷ, ಅಪಘಾತ ಹಾಗೂ ಗಂಭೀರ ಅನಾರೋಗ್ಯಕ್ಕೆ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷದ ವರೆಗೆ ಪರಿಹಾರ ದೊರಕಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 08194-231394 ಹಾಗೂ ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments