ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ; ನೈಟ್ ವಾಚಮನ್ ಕೂಡ ಹೌದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

by | 13/03/23 | ಸುದ್ದಿ

ಬೆಂಗಳೂರು: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಕರ್ನಾಟಕ ಮಾದ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಪ್ರಶಸ್ತಿ ಸಿಗುವಂತಹದ್ದು ಇನ್ನಷ್ಟು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಲಿ ಅಂತ ಎನ್ನುವುದು ನನ್ನ ಭಾವನೆ. ನೀವು ಒಳ್ಳೆಯ ಕೆಲಸ ಮಾಡಿದ್ದಕ್ಕೆ ಗುರುತಿಸಿರುತ್ತಾರೆ. ಪ್ರಶಸ್ತಿಯ ಪಾವಿತ್ರ್ಯತೆ ಹೇಗೆ ಇದೆ ಎಂದರೆ, ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಬೇಕು ಅಂತ ಎಂದು ಸಿಎಂ ಬೊಮ್ಮಾಯಿ‌ ಅವರು ಹೇಳಿದರು.

ಪತ್ರಿಕೋದ್ಯಮ ಬಹಳ ಹೆಳೆಯ ವೃತ್ತಿ. ವಿಶ್ವದ ನಾಗರಿಕತೆಯ ಬೆಳವಣಿಗೆಯಲ್ಲಿ ಬಹಳ ದೊಡ್ಡ ಪಾತ್ರವಿದೆ. ತಂತ್ರಜ್ಞಾನ ಹೆಚ್ಚಾದಂತೆ ಪತ್ರಿಕೋದ್ಯಮದಲ್ಲಿ ದೊಡ್ಡ ಬದಲಾವಣೆಯಾಗಿದೆ. ಅದರಲ್ಲೂ ವಿಶ್ವಯುದ್ಧ 1 ಮತ್ತು 2 ರ ಬಳಿಕ ಮಷೀನ್ ಮ್ಯಾನುಫ್ಯಾಕ್ಚುರಿಂಗ್ ಮತ್ತು ಪತ್ರಿಕೋದ್ಯಮದಲ್ಲಿ ಬಹಳ ಬದಲಾವಣೆ ಆಗಿದೆ. ವರ್ಡ್ ಆರ್ಡರ್ ಕೂಡ ಬದಲಾವಣೆ ಆಗಿದೆ. ಭಾರತದಲ್ಲಿ ಸ್ವಾತಂತ್ರ್ಯ ‌ಪೂರ್ವದ ಪತ್ರಿಕೋದ್ಯಮ ಹಾಗೂ ಸ್ವಾತಂತ್ರ್ಯ ‌ನಂತರದ ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾರತದ ಪತ್ರಿಕೋದ್ಯಮ ಪಾತ್ರ ಮುಖ್ಯವಾಗಿದೆ. ಅದೊಂದು ಸುವರ್ಣಯುಗ ಎಂದರು.

ಪ್ರಜಾಪ್ರಭುತ್ವ ಇರಬೇಕಾಗಿರುವುದು ನ್ಯಾಯಾಂಗ, ಶಾಸಕಾಂಗ ಮತ್ತು ಪತ್ರಿಕೋದ್ಯಮದಲ್ಲಿ. ಕಾಲ ಕಾಲಕ್ಕೆ ಪರಿಣಾಮಕಾರಿ ಕಾನೂನು ಮಾಡಿ ಅದಕ್ಕೆ ತಕ್ಕ ಹಾಗೆ ನ್ಯಾಯಾಂಗ ಕಾರ್ಯವನ್ನು ಮಾಡಿದೆ. ಕಾನೂನಿನ ಹೊರತಾಗಿ ಸ್ವತಂತ್ರವಾಗಿ ಕೆಲಸ ಮಾಡಿದ್ದು ಪತ್ರಿಕೋದ್ಯಮ. ಇಲ್ಲಿ ಪ್ರಶಸ್ತಿ ಪಡೆದ ಬಹುತೇಕರು ಮೂವತ್ತು ವರ್ಷದಿಂದ ಪರಿಚಯ. ಅವರು ಎಷ್ಟೊಂದು ಕಷ್ಟ ಪಟ್ಟು ಸುದ್ದಿ ಸಂಗ್ರಹಿಸುತ್ತಿದ್ದರು ಎನ್ನುವುದು ನನಗೆ ಅರಿವಿದೆ ಎಂದರು.

ಧಾರವಾಡ, ರಾಯಚೂರು, ಮೈಸೂರಿನಲ್ಲಿ ಕೆಲಸ ಮಾಡುವ ಪತ್ರಕರ್ತರು ಎಷ್ಟು ಕೆಲಸ ಮಾಡುತ್ತಾರೆ ಎನ್ನುವುದು ನನಗೆ ಗೊತ್ತು. ವಿಜಯ ಸಂಕೇಶ್ವರ ಅವರ ಹೊಸ ಪ್ರಯತ್ನ, ಜನರ ಧ್ವನಿಯಾಗಿ ಕೆಲಸ ಮಾಡುವ ರಂಗಣ್ಣ. ಮಾಧ್ಯಮ ಅಕಾಡೆಮಿ ಕೇವಲ ಪ್ರಶಸ್ತಿ ಕೊಡುವ ಕೆಲಸ ಮಾಡದೇ, ಸಂಶೋದನೆ, ಹೊಸ ಪತ್ರಕರ್ತರಿಗೆ ಪ್ರೋತ್ಸಾಹ, ತಾಲ್ಲೂಕು, ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು ಎಂದರು.

Member Login


ಪತ್ರಿಕೋದ್ಯಮ ಹಾಗೂ ರಾಜಕಾರಣಿಗಳ ಸಂಬಂಧ ಅವಿನಾಭಾವ ಸಂಬಂಧ. ರಾಜಕೀಯ ಇಲ್ಲದೆ ಪತ್ರಿಕೆಗಳು ನಡೆಯುವುದಿಲ್ಲ. ಪತ್ರಿಕೆಗಳಿಲ್ಲದೇ ರಾಜಕಾರಣಿಗಳಿಲ್ಲ.
ಪತ್ರಿಕೆಗಳು ಸಕಾರಾತ್ಮಕ ಸುದ್ದಿಗಳಿಗೆ ಆದ್ಯತೆ ನೀಡಿ, ಜನರಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ ಹಾಗೂ ಉದ್ಯಮಿ ವಿಜಯ ಸಂಕೇಶ್ವರ್, ಡಾ. ಸುಧಾಮೂರ್ತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page