ಚಳ್ಳಕೆರೆ ಜನಧ್ವನಿ ವಾರ್ತೆ ಜೂ.5
ಪರಿಸರದ ಅಸಮತೋಲನದಿಂದಾಗಿ ಇಡೀ ಜೀವ ಸಂಕುಲದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಉಪವಿಭಾಗಾಧಿಕಾರಿ ಚಂದ್ರಯ್ಯ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದಾರೆ.
ಪರಿಸರ ಸಂರಕ್ಷಣೆ ಮಾಡಿದಾಗ ಮಾತ್ರ ಜೀವ ಸಂಕುಲಗಳು ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಲು ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಹವಾಮಾನದಲ್ಲಿ ಸಮತೋಲನ ತರಲು ಪ್ರಯತ್ನಿಸಬೇಕು. ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ
ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಹೆಚ್ಚು ಗಿಡ ಮರಗಳಿರುವುರಿದಂತೆ ತಂಪಾದ ವಾತಾವರಣವಿದೆ ನೆರಳಿನ ಕೆಳಗೆ ಎಷ್ಟು ವಾಹನಗಳನ್ನು ನಿಲ್ಲಿಸಲಾಗಿದೆ ಪ್ರತಿಯೊಂದು ಸರಕಾರಿ ಕಚೇರಿ ಆವರಣದಲ್ಲಿ ಗಿಡ ಮರಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿದಾಗ ಮಾತ್ರ ವಿಶ್ವಪರಿಸರ ದಿನಾಚರಣೆ ಅರ್ಥ ಬರುತ್ತದೆ ಎಂದು ತಿಳಿಸಿದರು.
ತಹಶೀಲ್ದಾರ್ ರೇಹಾನ್ ಪಾಷ, ತಾಪಂ ಇಒ ಹೊನ್ನಯ್ಯ, ತಾಪಂ ಯೋಜನಾಧಿಕಾರಿ ದಿವಾಕರ್ ಸಹಯಾಯಕ ನಿರ್ದೇಶಕರಾದ ಸಂಪತ್, ಸಂತೋಷ್ , ಕಂದಾಯ ನಿರೀಕ್ಷಕ ಲಿಂಗೇಗೌಡ.ಗ್ರಾಮಲೆಕ್ಕಾಧಿಕಾರಿ ಪ್ರಕಾಶ್, ತಾಪಂ ವ್ಯವಸ್ಥಾಪಕ ಇರ್ಪಾನ್ ಅರಣ್ಯ ಇಲಾಖೆ ಹಾಗೂ ತಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದು
0 Comments