ಹಿರಿಯೂರು ಏ 01:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ ಗ್ರಾಮದಲ್ಲಿ ಇದೇ ಏಪ್ರಿಲ್ 5ರಂದು ಬೆಳಿಗ್ಗೆ 11ಕ್ಕೆ ನಿಗಧಿಪಡಿಸಿದ್ದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರು ಭಾರತ್ ಮಾಲಾ ಪರಿಯೋಜನೆಗೆ ಸಂಬಂಧಿಸಿದ ಪರಿಸರ ಸಾರ್ವಜನಿಕ ಆಲಿಕಾ ಸಭೆ ಹಾಗೂ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಮತ್ತು ಕಾಪರಹಳ್ಳಿ ಗ್ರಾಮಗಳ ವಿವಿಧ ಸರ್ವೇ ನಂಬರ್ಗಳ ಯೋಜನಾ ಸ್ಥಳದಲ್ಲಿ ಇದೇ ಏಪ್ರಿಲ್ 12ರಂದು 11ಕ್ಕೆ ನಿಗಧಿಪಡಿಸಿದ್ದ ಪ್ರಕಾಶ್ ಸ್ಪಾಂಜ್ ಐರನ್ ಮತ್ತು ಪವರ್ ಪ್ರೈ.ಲಿಮಿಟೆಡ್ ಘಟಕ್ಕೆ ಸಂಬಂಧಿಸಿದ ಪರಿಸರ ಸಾರ್ವಜನಿಕ ಆಲಿಕಾ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿತ್ರದುರ್ಗ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆವಹಿಸಬೇಕಾಗಿರುವ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಪ್ರಯುಕ್ತ ಚುನಾವಣಾ ಕಾರ್ಯದ ನಿಮಿತ್ತಾ ಏಪ್ರಿಲ್ 5 ಹಾಗೂ 12ರಂದು ಯೋಜನಾ ಸ್ಥಳದಲ್ಲಿ ನಿಗಧಿಪಡಿಸಿದ್ದ ಪರಿಸರ ಸಾರ್ವಜನಿಕ ಆಲಿಕಾ ಸಭೆಯನ್ನು ರದ್ದು ಪಡಿಸಲಾಗಿದ್ದು, ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
======
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments