ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆ ನಿಷೇಧ ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬ ಆಚರಿಸಿ -ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

by | 31/08/23 | ಪರಿಸರ


ಚಿತ್ರದುರ್ಗ ಆ.31:
ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಷೇಧಿತ ಗಣಪತಿ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ಮಾಡುವುದನ್ನು ಪರಿಸರ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ತಡೆಗಟ್ಟಬೇಕು. ನಿಷೇಧಿತ ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ಪರಿಸರ ಅಧಿಕಾರಿಗಳು ನಿಗಾ ವಹಿಸಬೇಕು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಿವಿಧ ಊರು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ವಾಹನಗಳ ಮೂಲಕ ಪಿಓಪಿ ಗಣಪತಿ ವಿಗ್ರಹಗಳ ಸಾಗಾಣಿಕೆ ತಡೆಯಲು ಚೆಕ್ ಪೋಸ್ಟ್‍ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಪಿಓಪಿ ಗಣಪತಿ ಮಾರಾಟ ಮಾಡುವ ಅಂಗಡಿಗಳಿಗೆ ಲೈಸೆನ್ಸ್ ನೀಡಬಾರದು. ಅಕ್ರಮವಾಗಿ ನಿಷೇಧಿತ ಗಣಪತಿ ವಿಗ್ರಹಗಳ ಮಾರಾಟ ಕಂಡುಬಂದರೆ ತಕ್ಷಣವೇ ಅಂತಹ ಅಂಗಡಿಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಬೇಕು, ಅಲ್ಲದೆ ಸುಪರ್ದಿಗೆ ಪಡೆದ ನಿಷೇಧಿತ ವಿಗ್ರಹಗಳನ್ನು ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.
ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ
***************
ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಪ್ರತಿಯೊಬ್ಬರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅನುಮತಿ ನೀಡುವ ಸಂದರ್ಭದಲ್ಲಿ ನಿಷೇದಿತ ಪಿಒಪಿ ಹಾಗೂ ಆಯಿಲ್ ಪೇಂಟಿಗ್ ಗಣೇಶ ಮೂರ್ತಿಗಳು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನಿರ್ಬಂಧ ಹೇರಬೇಕು. ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಬೇಕು. ಯಾವುದೇ ಕಾರಣಕ್ಕೂ ಕೋಮು ಸೌಹಾರ್ಧತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಶಾಂತಿ ಸಭೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಿಗಧಿತ ಸ್ಥಳದಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ
***************
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಗಣೇಶ ಮೂರ್ತಿ ವಿಜಸರ್ಜನೆಗೆ ಸ್ಥಳ ಗುರುತಿಸಬೇಕು. ಕೆರೆ, ಕಲ್ಯಾಣಿಗಳಲ್ಲಿ ನೇರವಾಗಿ ಮೂರ್ತಿಗಳನ್ನು ವಿಸರ್ಜಿಸಲು ಅವಕಾಶ ನೀಡಬೇಡಿ. ತಾತ್ಕಾಲಿಕವಾಗಿ ವಿಸರ್ಜನೆಗೆ ಪ್ರತ್ಯೇಕವಾಗಿ ಕೃತಕ ಟ್ಯಾಂಕ್‍ಗಳನ್ನು ನಿರ್ಮಿಸಬೇಕು. ಸ್ಥಳದಲ್ಲಿ ಹೂವು, ಹಣ್ಣು, ಬಾಳೆಕಂಬ ಮಾವಿನ ತೋರಣ ಸೇರಿದಂತೆ ಇತರೆ ಹಸಿ ತ್ಯಾಜ್ಯಗಳನ್ನು ಸಂಗ್ರಹಿಸಲು ವ್ಯವಸ್ಥೆ ಕಲ್ಪಿಸಬೇಕು, ನೀರಿನಲ್ಲಿ ಮೂರ್ತಿಗಳೊಂದಿಗೆ ಇವುಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಬೇಕು, ಗಣೇಶ ಹಬ್ಬದ ನಂತರ ಮೂರ್ತಿ ವಿಸರ್ಜಿಸುವ ದಿನಗಳಂದು ಸಂಚಾರಿ ಟ್ಯಾಂಕರ್ ಮೂಲಕ ನಗರದ ಓಣಿಗಳಿಗೆ ತೆರಳಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಬೇಕು, ಈ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಸಾಕಷ್ಟು ಮೊದಲೇ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಟಿ.ಆರ್.ನಯಿಂ ಅಹಮದ್ ಸೇರಿದಂತೆ ಎಲ್ಲಾ ನಗರಸಭೆಯ ಪರಿಸರ ಅಭಿಯಂತರ ಜಾಫರ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page