ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆ ನಿಷೇಧ ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬ ಆಚರಿಸಿ -ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

by | 31/08/23 | ಪರಿಸರ


ಚಿತ್ರದುರ್ಗ ಆ.31:
ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಷೇಧಿತ ಗಣಪತಿ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ಮಾಡುವುದನ್ನು ಪರಿಸರ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ತಡೆಗಟ್ಟಬೇಕು. ನಿಷೇಧಿತ ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ಪರಿಸರ ಅಧಿಕಾರಿಗಳು ನಿಗಾ ವಹಿಸಬೇಕು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಿವಿಧ ಊರು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ವಾಹನಗಳ ಮೂಲಕ ಪಿಓಪಿ ಗಣಪತಿ ವಿಗ್ರಹಗಳ ಸಾಗಾಣಿಕೆ ತಡೆಯಲು ಚೆಕ್ ಪೋಸ್ಟ್‍ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಪಿಓಪಿ ಗಣಪತಿ ಮಾರಾಟ ಮಾಡುವ ಅಂಗಡಿಗಳಿಗೆ ಲೈಸೆನ್ಸ್ ನೀಡಬಾರದು. ಅಕ್ರಮವಾಗಿ ನಿಷೇಧಿತ ಗಣಪತಿ ವಿಗ್ರಹಗಳ ಮಾರಾಟ ಕಂಡುಬಂದರೆ ತಕ್ಷಣವೇ ಅಂತಹ ಅಂಗಡಿಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಬೇಕು, ಅಲ್ಲದೆ ಸುಪರ್ದಿಗೆ ಪಡೆದ ನಿಷೇಧಿತ ವಿಗ್ರಹಗಳನ್ನು ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.
ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ
***************
ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಪ್ರತಿಯೊಬ್ಬರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಅನುಮತಿ ನೀಡುವ ಸಂದರ್ಭದಲ್ಲಿ ನಿಷೇದಿತ ಪಿಒಪಿ ಹಾಗೂ ಆಯಿಲ್ ಪೇಂಟಿಗ್ ಗಣೇಶ ಮೂರ್ತಿಗಳು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನಿರ್ಬಂಧ ಹೇರಬೇಕು. ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಬೇಕು. ಯಾವುದೇ ಕಾರಣಕ್ಕೂ ಕೋಮು ಸೌಹಾರ್ಧತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಶಾಂತಿ ಸಭೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಿಗಧಿತ ಸ್ಥಳದಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ
***************
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಗಣೇಶ ಮೂರ್ತಿ ವಿಜಸರ್ಜನೆಗೆ ಸ್ಥಳ ಗುರುತಿಸಬೇಕು. ಕೆರೆ, ಕಲ್ಯಾಣಿಗಳಲ್ಲಿ ನೇರವಾಗಿ ಮೂರ್ತಿಗಳನ್ನು ವಿಸರ್ಜಿಸಲು ಅವಕಾಶ ನೀಡಬೇಡಿ. ತಾತ್ಕಾಲಿಕವಾಗಿ ವಿಸರ್ಜನೆಗೆ ಪ್ರತ್ಯೇಕವಾಗಿ ಕೃತಕ ಟ್ಯಾಂಕ್‍ಗಳನ್ನು ನಿರ್ಮಿಸಬೇಕು. ಸ್ಥಳದಲ್ಲಿ ಹೂವು, ಹಣ್ಣು, ಬಾಳೆಕಂಬ ಮಾವಿನ ತೋರಣ ಸೇರಿದಂತೆ ಇತರೆ ಹಸಿ ತ್ಯಾಜ್ಯಗಳನ್ನು ಸಂಗ್ರಹಿಸಲು ವ್ಯವಸ್ಥೆ ಕಲ್ಪಿಸಬೇಕು, ನೀರಿನಲ್ಲಿ ಮೂರ್ತಿಗಳೊಂದಿಗೆ ಇವುಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಬೇಕು, ಗಣೇಶ ಹಬ್ಬದ ನಂತರ ಮೂರ್ತಿ ವಿಸರ್ಜಿಸುವ ದಿನಗಳಂದು ಸಂಚಾರಿ ಟ್ಯಾಂಕರ್ ಮೂಲಕ ನಗರದ ಓಣಿಗಳಿಗೆ ತೆರಳಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಬೇಕು, ಈ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಸಾಕಷ್ಟು ಮೊದಲೇ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಟಿ.ಆರ್.ನಯಿಂ ಅಹಮದ್ ಸೇರಿದಂತೆ ಎಲ್ಲಾ ನಗರಸಭೆಯ ಪರಿಸರ ಅಭಿಯಂತರ ಜಾಫರ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page