ಪುಟ್ಟ ಬಾಲಕಿಯ ಪತ್ರಕ್ಕೆ ಸ್ಪಂಧಿಸಿ 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು 9 ಮತ್ತು 10ನೇ ತರಗತಿಗೂ ವಿಸ್ತರಿಸಿದ ಮುಖ್ಯಮಂತ್ರಿ ಸಿದ್ದರಾಮ್ಯ.

by | 08/09/23 | ವೈರಲ್

ಬೆಂಗಳೂರು ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ.

ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ‌ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *