ಚಳ್ಳಕೆರೆ ಫೆ13ನಗರಸಭೆಯ ಹೊರಗುತ್ತಿಗೆ ಪೌರಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಬಹಳ ವರ್ಷಗಳಿಂದ ನಗರ ಸ್ವಚ್ಚತೆ ಮಾಡಿಕೊಂಡು ಬರುತ್ತಿದ್ದರೂ ನೇರ ಪಾವತಿ ನೇಮಕ ಮಾಡಿಕೊಳ್ಳುವಂತೆ ಅನೇಕ ಬಾರಿ ಸರಕಾರಗಮನ ಸೆಳೆದರೂ ಯಾವುದೇ ಪ್ರಯೋಜನವಾಗದ ಕಾರಣ ನೇರ ನೇಮಕಾತಿಗೆ ಆಗ್ರಹಿಸಿ ಫೆ ೧೫ ರಂದು ಹೊರಗುತ್ತಿಗೆ ಕಾರ್ಮಿಕರು ಹಾಗೂ ಪೌರಕಾರ್ಮಿಕರ ನಡಿಗೆ ಮುಖ್ಯಮಂತ್ರಿ ಮನೆ ಕಡೆ ಎಂಬ ವಿನೂತನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಚತೆ, ಕುಡಿಯುವ ನೀರು, ವಾಹನ ಚಾಲಕರು ಸೇರಿದಂತೆ ನಗರ ಸ್ವಚ್ಚತೆಗೆ ಶ್ರಮಿಸುತ್ತಾ ಬಂದರೂ ಸಹ ನಮ್ಮ ಬೇಡಿಕೆ ಈಡೇರಿಸಲು ಸರಕಾರ ಮೀನಾ ಮೇಷ ಎಣಿಸುತ್ತಿರುವುದನ್ನು ಖಂಡಿಸಿ ರಾಜ್ಯ ಮುಖ್ಯ ಮಂತ್ರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಪೌರಕಾರ್ಮಿಕರು ಅಕ್ರೋಶವನ್ನು ಹೊರ ಹಾಕಿದ್ದಾರೆ.
ಪ್ರತಿಭಟನೆಯಲ್ಲಿ ತಾಲೂಕು ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಮಂಜುನಾಥ, ಪೆನ್ನೇಶ್, ಸೇರಿದಂತೆ ನಗರಭೆಯ ಹೊರಗುತ್ತಿಗೆ ಕಾರ್ಮಿಕರು ಭಾಗವಹಿಸಿದ್ದರು.
ಫೋಟೊ ಡಿ೧೩-ಸಿಎಲ್ಕೆ೨ ಚಳ್ಳಕೆರೆ ನಗರದ ನಗರಸಭೆ ಕಚೇರಿ ಮುಂಭಾಗದಲ್ಲಿ ನಗರಸಭೆ ಹೊರಗುತ್ತಿಗೆ ಪೌರಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments