ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

by | 20/12/23 | ಪ್ರತಿಭಟನೆ

ಚಳ್ಳಕೆರೆ ಡಿ.20. ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನರಸಭೆ ಪೌರಲಾರ್ಮಿಕರು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಪೌರ ಕಾರ್ಮಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಚಳ್ಳಕೆರೆ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ
ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರ ಬಹುದಿನದ ಬೇಡಿಕೆ 2017 ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೌರಕಾರ್ಮಿಕರನ್ನು ಖಾಯಂ
ಗೊಳಿಸಲಾಯಿತು. ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ತರಲಾಗುವುದು ಎಂದು ಆಶ್ವಾಸನೆ
ನೀಡಲಾಗಿತ್ತು. ಕಳೆದ ಸರ್ಕಾರದಲ್ಲಿ ತೀರ್ವ ಹೋರಾಟದ ಪರಿಣಾಮ ನಗರ, ಸ್ಥಳೀಯ ಸಂಸ್ಥೆಗಳ
ಹೊರಗುತ್ತಿಗೆ ನೌಕರರ ನೇರ ಪಾವತಿ ಕಡತ ಹಣಕಾಸು ಇಲಾಖೆಯಲ್ಲಿ ಪರಿಶೀಲನೆ ಇರುವಾಗಲೇ
ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿ ಕಡತ ನಗರಾಭಿವೃದ್ಧಿ ಇಲಾಖೆಗೆ
ವಾಪಾಸಾಗಿದೆ. ಈ ಸಂಬಂಧ ಕಡತವನ್ನು ಸಂಪುಟದಲ್ಲಿ ಅಂಗೀಕರಿಸುವಂತೆ ಚಳ್ಳಕೆರೆ ನಗರಸಭೆ
ಹೊರಗುತ್ತಿಗೆ ಕಾರ್ಮಿಕರು ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ
ಹೊರಗುತ್ತಿಗೆ ನೌಕರರು ಕೋರಿರುತ್ತಾರ.
ಬೇಡಿಕೆಗಳು
1)ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಂತೆ ಕರ್ತವ್ಯ ನಿರ್ವಹಿಸಲು ಎಲ್ಲಾ ಹೊರಗುತ್ತಿಗೆ ನೌಕರರಾದ
ಕಾರ್ಮಿಕರು ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಇವರನ್ನು ಏಕಕಾಲಕ್ಕೆ ಗುತ್ತಿಗೆ
ಪದ್ಧತಿಯ ಬದಲು ನೇರ ಪಾವತಿಗೆ ತರಬೇಕು. 1964 ರ ಪೌರಾಡಳಿತ ಕಾಯ್ದೆ ಪ್ರಕಾರ ಇವರನ್ನು
ಪೌರಕಾರ್ಮಿಕರೆಂದು ಒಪ್ಪಿರಿವುದರಿಂದ ಹಾಲಿ ನೇಮಕಾತಿಯಲ್ಲಿ ಇವರಿಗೂ ಅವಕಾಶ ಕಲ್ಪಿಸಬೇಕು.
2)ಮಾಸಿಕ ರೂ. 2000/- ಸಂಕಷ್ಟ ಭತ್ಯೆಯನ್ನು ಸ್ವಚ್ಛತೆಯಲ್ಲಿ ತೊಡಗಿಕೊಂಡ ಎಲ್ಲಾ ಹೊರಗುತ್ತಿಗೆ
ಕಾರ್ಮಿಕರಿಗೂ ವಿಸ್ತರಿಸಬೇಕು.
3)ನಗರುತ್ಪಾದನೆಯ ಯೋಜನೆಯಡಿಯಲ್ಲಿ ಕಾರ್ಮಿಕರು ಕ್ಲೀನರ್ಸ್, ಲೋಡರ್ಸ್, ಸಹಾಯಕರು,
ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರಿಗೂ ನಿವೇಶನ ಖರೀದಿಸಲು ಸಹಾಯಧನ ನೀಡಬೇಕು.
4)ದಿನಾಂಕ:28/08/2023 ರಂದು ಚಳ್ಳಕೆರೆ ನಗರಸಭೆಯ ಆವರಣದಲ್ಲಿ ಜರುಗಿದ ಜನ ಸಂಪರ್ಕ
ಸಭೆಯಲ್ಲಿ ಚಳ್ಳಕೆರೆಯ ಜನಪ್ರಿಯ ಶಾಸಕರಾದ ಟಿ. ರಘುಮೂರ್ತಿರವರಿಗೆ ಚಳ್ಳಕೆರೆ ನಗರಸಭೆವತಿಯಿಂದ
ಪೌರಕಾರ್ಮಿಕರಾದ ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರು ಮನವಿ ನೀಡಿರುತ್ತಾರೆ. ಚಳ್ಳಕೆರೆ ನಗರಸಭೆಯ ಪೌರಾಯುಕ್ತರಿಗೆ ಈ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮವಹಿಸಲು ತಿಳಿಸಿರುತ್ತಾರೆ. ಹೊರಗುತ್ತಿಗೆ ನೇರ ಪಾವತಿ ಬಗ್ಗೆ, ನಗರಸಭೆಯ ಪೌರಾಯುಕ್ತರನ್ನು ಕೇಳಿದರ ಏನೇನೋ ಸಬೂಬು ಹೇಳುತ್ತ ಸಮಾದಾನ ಪಡಿಸುತ್ತಾರೆಂದು ನೇರ ಪಾವತಿಗೆ ಒತ್ತಾಯಿಸಿ ನಗರಸಭೆಯ ಕಛೇರಿ ಮುಂದೆ ಸ್ವಚ್ಛತಾ ಕೆಲಸ ಸ್ಥಗಿತ ಮಾಡಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಾಲುವುದು ಎಂದು ಪ್ರಸನ್ನಕುಮಾರ್. ಹನುಮಂತರಾಯ.ಮಂಜಣ್ಣ.ಮಂಜುನಾಥ.ದೇವರಾಜ್.ಪೆನ್ನೇಶ್ ಸೇರಿದಂತೆ 55 ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page