ಹಿರಿಯೂರು :
ವಾಣಿವಿಲಾಸ ಪತ್ತಿನ ಸಹಕಾರ ಸಂಘವು ಪ್ರಸ್ತುತ ಸಾಲಿನಲ್ಲಿ 8 ಕೋಟಿ 37ಲಕ್ಷ 96 ಸಾವಿರದ 526 ರೂಗಳ ವಹಿವಾಟು ನಡೆಸಿದ್ದು, ಸಂಘದ ದುಡಿಯುವ ಬಂಡವಾಳ 2 ಕೋಟಿ 25 ಲಕ್ಷದ 21 ಸಾವಿರದ 315 ರೂಗಳಿದ್ದು, ಈ ಸಾಲಿನಲ್ಲಿ 5 ಲಕ್ಷ 64 ಸಾವಿರದ 336 ರೂ.ಗಳ ನಿವ್ವಳ ಲಾಭಗಳಿಸಿ ಪ್ರಗತಿಯ ಹಾದಿಯಲ್ಲಿ ಸಾಗಿದೆ ಎಂಬುದಾಗಿ ವಾಣಿವಿಲಾಸ ಪತ್ತಿನ ಸಹಾಕಾರ ಸಂಘದ ಅಧ್ಯಕ್ಷರಾದ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿನ ವಾಣಿವಿಲಾಸ ವಿದ್ಯಾಸಂಸ್ಥೆಯ “ವಾಣಿವಿಲಾಸ ಸಭಾಂಗಣ”ದಲ್ಲಿ ಏರ್ಪಡಿಸಲಾಗಿದ್ದ, ವಾಣಿವಿಲಾಸ ಪತ್ತಿನ ಸಹಕಾರಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ವಾಣಿವಿಲಾಸ ಪತ್ತಿನ ಸಹಕಾರ ಸಂಘವು ತಮ್ಮೆಲ್ಲರ ಸಹಕಾರದೊಂದಿಗೆ ಉತ್ತಮ ವಹಿವಾಟು ನಡೆಸಿ, 23 ವರ್ಷಗಳನ್ನು ಪೂರೈಸಿ 24 ನೇ ವರ್ಷಕ್ಕೆ ಕಾಲಿಟ್ಟಿದೆ. ನಮ್ಮ ಸಂಘವು ಷೇರುದಾರ ಸದಸ್ಯರ ಹಾಗೂ ಗ್ರಾಹಕರ ಸಹಕಾರದಿಂದ ಯಶಸ್ಸಿನತ್ತ ಸಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಾಣಿವಿಲಾಸ ಪತ್ತಿನ ಸಹಕಾರಸಂಘದ ಸಲಹಾ ಸಮಿತಿ ಸದಸ್ಯರು ಹಾಗೂ ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಮಾತನಾಡಿ, ಯಾವುದೇ ಸಹಕಾರ ಸಂಘ ಯಶಸ್ಸಿನ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ಮಂಡಳಿ, ಉತ್ತಮ ಸಿಬ್ಬಂದಿ ಹಾಗೂ ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಗ್ರಾಮಹಕರನ್ನು ಹೊಂದಿರಬೇಕು ಎಂಬುದಾಗಿ ಹೇಳಿದರು.
ವಾರ್ಷಿಕ ಮಹಾಸಭೆಯ ನೋಟಿಸನ್ನು ಸಂಘದ ಉಪಾಧ್ಯಕ್ಷ ಪಿ.ಆರ್.ಸತೀಶ್ ಬಾಬು ಸಭೆಯಲ್ಲಿ ಓದಿದರು. ಸಂಘದ ಆಡಳಿತಮಂಡಳಿ ವರದಿಯನ್ನು ವ್ಯವಸ್ಥಾಪಕಿ ಶ್ರೀಮತಿ ನಂದಿನಿ, 2022-23ನೇ ಸಾಲಿನ ಜಮಾ ಖರ್ಚು ಹಾಗೂ ಲಾಭ ನಷ್ಟದ ತಃಖ್ತೆಯನ್ನು ಸಂಘದ ನಿರ್ದೇಶಕರರಾದ ಟಿ.ಮಲ್ಲೇಶಪ್ಪ ಹಾಗೂ 2023-24ನೇ ಸಾಲಿನ ಅಂದಾಜು ಆಯವ್ಯಯವನ್ನ ಲೇಖಪಾಲಕ ಶಿವರಾಜ್ ಹಾಗೂ ಕುಮಾರಿ ಚೈತ್ರ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.
ಇದೇ ಸಂದರ್ಭದಲ್ಲ್ಲಿ ಸಂಘದಲ್ಲಿ ಅತಿಹೆಚ್ಚಿನ ವ್ಯವಹಾರ ಮಾಡಿದಂತಹ ಗ್ರಾಹಕರುಗಳನ್ನು ಹಾಗೂ ಸಂಘದಲ್ಲಿ ಠೇವಣಿ ಮಾಡಿದಂತಹ ಹೂಡಿಕೆದಾರ ಸದಸ್ಯರುಗಳನ್ನು ಮತ್ತು ಸಂಘದಲ್ಲಿ ಸಾಲಸೌಲಭ್ಯ ಪಡೆದು, ಪ್ರಾಮಾಣಿಕವಾಗಿ ಸಂಘಕ್ಕೆ ಸಾಲ ಮರುಪಾವತಿ ಮಾಡಿರುವ ಸಂಘದ ಸದಸ್ಯರುಗಳನ್ನು ಪುಷ್ಪಮಾಲೆ ಹಾಕಿ, ಸನ್ಮಾನಿಸಿ, ಅಭಿನಂದಿಸಲಾಯಿತು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಚಿನ್ನದ ಹುಡುಗಿ ಕುಮಾರಿ ಅಮೃತಲಕ್ಷ್ಮೀರವರಿಗೆ ಶಾಲುಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ವೇದಿಕೆಯಲ್ಲಿ ವಾಣಿವಿಲಾಸ ಪತ್ತಿನಸಹಕಾರಸಂಘದ ಉಪಾಧ್ಯಕ್ಷರಾದ ಪಿ.ಆರ್.ಸತೀಶ್ ಬಾಬು, ಹಾಗೂ ನಿರ್ದೇಶಕರುಗಳಾದ ಟಿ.ಮಲ್ಲೇಶಪ್ಪ, ಜಯರಾಮಪ್ಪ, ಹೆಚ್.ಡೀಶಪ್ಪ, ಎಸ್.ಮೂರುಕಣ್ಣಪ್ಪ, ಶ್ರೀಮತಿ ಸ್ವರೂಪರಾಣಿ, ಶ್ರೀಮತಿ ಟಿ.ಪ್ರೇಮಲತ, ಇವರುಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಾಣಿವಿಲಾಸಪತ್ತಿನ ಸಹಕಾರಸಂಘದ ವ್ಯವಸ್ಥಾಪಕರಾದ ಶ್ರೀಮತಿ ಎಸ್.ನಂದಿನಿ, ಲೇಖಪಾಲಕರಾದ ಈ.ಶಿವರಾಜ್, ನಗದುಗುಮಾಸ್ತರಾದ ಆರ್.ಎನ್.ಪ್ರಭಾಕರ್, ಸಿಬ್ಬಂದಿ ಕುಮಾರಿ ಚೈತ್ರ, ಪಿಗ್ಮಿ ಸಂಗ್ರಹಗಾರರಾದ ಪಿ.ಎನ್.ಪರಮೇಶ್ವರಪ್ಪ, ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶಿಕ್ಷಕರಾದ ಉಮೇಶ್ ಯಾದವ್ ಹಾಗೂ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ ವರ್ಗದವರು, ಷೇರುಸದಸ್ಯರು ಹಾಗೂ ಗ್ರಾಹಕರು ಪಾಲ್ಗೊಂಡಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments