ಪ್ರಗತಿಯಹಾದಿಯಲ್ಲಿ ವಾಣಿವಿಲಾಸಪತ್ತಿನ ಸಹಕಾರಸಂಘ ಸಹಕಾರ ಸಂಘದ ಅಧ್ಯಕ್ಷ : ಆಲೂರುಹನುಮಂತರಾಯಪ್ಪ

by | 23/09/23 | ಆರ್ಥಿಕ


ಹಿರಿಯೂರು :
ವಾಣಿವಿಲಾಸ ಪತ್ತಿನ ಸಹಕಾರ ಸಂಘವು ಪ್ರಸ್ತುತ ಸಾಲಿನಲ್ಲಿ 8 ಕೋಟಿ 37ಲಕ್ಷ 96 ಸಾವಿರದ 526 ರೂಗಳ ವಹಿವಾಟು ನಡೆಸಿದ್ದು, ಸಂಘದ ದುಡಿಯುವ ಬಂಡವಾಳ 2 ಕೋಟಿ 25 ಲಕ್ಷದ 21 ಸಾವಿರದ 315 ರೂಗಳಿದ್ದು, ಈ ಸಾಲಿನಲ್ಲಿ 5 ಲಕ್ಷ 64 ಸಾವಿರದ 336 ರೂ.ಗಳ ನಿವ್ವಳ ಲಾಭಗಳಿಸಿ ಪ್ರಗತಿಯ ಹಾದಿಯಲ್ಲಿ ಸಾಗಿದೆ ಎಂಬುದಾಗಿ ವಾಣಿವಿಲಾಸ ಪತ್ತಿನ ಸಹಾಕಾರ ಸಂಘದ ಅಧ್ಯಕ್ಷರಾದ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿನ ವಾಣಿವಿಲಾಸ ವಿದ್ಯಾಸಂಸ್ಥೆಯ “ವಾಣಿವಿಲಾಸ ಸಭಾಂಗಣ”ದಲ್ಲಿ ಏರ್ಪಡಿಸಲಾಗಿದ್ದ, ವಾಣಿವಿಲಾಸ ಪತ್ತಿನ ಸಹಕಾರಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ವಾಣಿವಿಲಾಸ ಪತ್ತಿನ ಸಹಕಾರ ಸಂಘವು ತಮ್ಮೆಲ್ಲರ ಸಹಕಾರದೊಂದಿಗೆ ಉತ್ತಮ ವಹಿವಾಟು ನಡೆಸಿ, 23 ವರ್ಷಗಳನ್ನು ಪೂರೈಸಿ 24 ನೇ ವರ್ಷಕ್ಕೆ ಕಾಲಿಟ್ಟಿದೆ. ನಮ್ಮ ಸಂಘವು ಷೇರುದಾರ ಸದಸ್ಯರ ಹಾಗೂ ಗ್ರಾಹಕರ ಸಹಕಾರದಿಂದ ಯಶಸ್ಸಿನತ್ತ ಸಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಾಣಿವಿಲಾಸ ಪತ್ತಿನ ಸಹಕಾರಸಂಘದ ಸಲಹಾ ಸಮಿತಿ ಸದಸ್ಯರು ಹಾಗೂ ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಮಾತನಾಡಿ, ಯಾವುದೇ ಸಹಕಾರ ಸಂಘ ಯಶಸ್ಸಿನ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ಮಂಡಳಿ, ಉತ್ತಮ ಸಿಬ್ಬಂದಿ ಹಾಗೂ ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಗ್ರಾಮಹಕರನ್ನು ಹೊಂದಿರಬೇಕು ಎಂಬುದಾಗಿ ಹೇಳಿದರು.
ವಾರ್ಷಿಕ ಮಹಾಸಭೆಯ ನೋಟಿಸನ್ನು ಸಂಘದ ಉಪಾಧ್ಯಕ್ಷ ಪಿ.ಆರ್.ಸತೀಶ್ ಬಾಬು ಸಭೆಯಲ್ಲಿ ಓದಿದರು. ಸಂಘದ ಆಡಳಿತಮಂಡಳಿ ವರದಿಯನ್ನು ವ್ಯವಸ್ಥಾಪಕಿ ಶ್ರೀಮತಿ ನಂದಿನಿ, 2022-23ನೇ ಸಾಲಿನ ಜಮಾ ಖರ್ಚು ಹಾಗೂ ಲಾಭ ನಷ್ಟದ ತಃಖ್ತೆಯನ್ನು ಸಂಘದ ನಿರ್ದೇಶಕರರಾದ ಟಿ.ಮಲ್ಲೇಶಪ್ಪ ಹಾಗೂ 2023-24ನೇ ಸಾಲಿನ ಅಂದಾಜು ಆಯವ್ಯಯವನ್ನ ಲೇಖಪಾಲಕ ಶಿವರಾಜ್ ಹಾಗೂ ಕುಮಾರಿ ಚೈತ್ರ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.
ಇದೇ ಸಂದರ್ಭದಲ್ಲ್ಲಿ ಸಂಘದಲ್ಲಿ ಅತಿಹೆಚ್ಚಿನ ವ್ಯವಹಾರ ಮಾಡಿದಂತಹ ಗ್ರಾಹಕರುಗಳನ್ನು ಹಾಗೂ ಸಂಘದಲ್ಲಿ ಠೇವಣಿ ಮಾಡಿದಂತಹ ಹೂಡಿಕೆದಾರ ಸದಸ್ಯರುಗಳನ್ನು ಮತ್ತು ಸಂಘದಲ್ಲಿ ಸಾಲಸೌಲಭ್ಯ ಪಡೆದು, ಪ್ರಾಮಾಣಿಕವಾಗಿ ಸಂಘಕ್ಕೆ ಸಾಲ ಮರುಪಾವತಿ ಮಾಡಿರುವ ಸಂಘದ ಸದಸ್ಯರುಗಳನ್ನು ಪುಷ್ಪಮಾಲೆ ಹಾಕಿ, ಸನ್ಮಾನಿಸಿ, ಅಭಿನಂದಿಸಲಾಯಿತು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಚಿನ್ನದ ಹುಡುಗಿ ಕುಮಾರಿ ಅಮೃತಲಕ್ಷ್ಮೀರವರಿಗೆ ಶಾಲುಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ವೇದಿಕೆಯಲ್ಲಿ ವಾಣಿವಿಲಾಸ ಪತ್ತಿನಸಹಕಾರಸಂಘದ ಉಪಾಧ್ಯಕ್ಷರಾದ ಪಿ.ಆರ್.ಸತೀಶ್ ಬಾಬು, ಹಾಗೂ ನಿರ್ದೇಶಕರುಗಳಾದ ಟಿ.ಮಲ್ಲೇಶಪ್ಪ, ಜಯರಾಮಪ್ಪ, ಹೆಚ್.ಡೀಶಪ್ಪ, ಎಸ್.ಮೂರುಕಣ್ಣಪ್ಪ, ಶ್ರೀಮತಿ ಸ್ವರೂಪರಾಣಿ, ಶ್ರೀಮತಿ ಟಿ.ಪ್ರೇಮಲತ, ಇವರುಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಾಣಿವಿಲಾಸಪತ್ತಿನ ಸಹಕಾರಸಂಘದ ವ್ಯವಸ್ಥಾಪಕರಾದ ಶ್ರೀಮತಿ ಎಸ್.ನಂದಿನಿ, ಲೇಖಪಾಲಕರಾದ ಈ.ಶಿವರಾಜ್, ನಗದುಗುಮಾಸ್ತರಾದ ಆರ್.ಎನ್.ಪ್ರಭಾಕರ್, ಸಿಬ್ಬಂದಿ ಕುಮಾರಿ ಚೈತ್ರ, ಪಿಗ್ಮಿ ಸಂಗ್ರಹಗಾರರಾದ ಪಿ.ಎನ್.ಪರಮೇಶ್ವರಪ್ಪ, ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಶಿಕ್ಷಕರಾದ ಉಮೇಶ್ ಯಾದವ್ ಹಾಗೂ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ ವರ್ಗದವರು, ಷೇರುಸದಸ್ಯರು ಹಾಗೂ ಗ್ರಾಹಕರು ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page