ಚಳ್ಳಕೆರೆ ಜನಧ್ವನಿ ವಾರ್ತೆ ಏ15
ಚುನಾವಣೆಗಳು ಪ್ರಜಾತಂತ್ರದ ಉತ್ಸವಗಳು. ದೇಶದ ಪ್ರಗತಿಯ ದಿಕ್ಕನ್ನು ಬದಲಾಯಿಸುವ ಶಕ್ತಿ ಮತದಾನಕ್ಕಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತವನ್ನು ಚಲಾಯಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ ಹೇಳಿದರು.
ಚಳ್ಳಕೆರೆ ನಗರದ ತಾಲೂಕು ಪಂಚಾಯತ್ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಕೆ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ಮತದಾನ ಹೆಚ್ಚಿಸಲು ಸ್ವೀಪ್ ಸಮಿತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು. ಮತದಾನದಂದು ಮನೆಯಲ್ಲಿನ ಹಬ್ಬದ ವಾತಾವರಣದಂತೆ ಮತದಾರರು ಮತಗಟ್ಟೆಗೆ ಬಂದು ಮತಚಲಾಯಿಸುವಂತೆ ಆಶಾ, ಅಂಗನವಾಡಿ ಕಾರ್ಯಕರ್ತ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜೀವನಾಡಿಗಳಿದ್ದು ನೆರೆ ಹೊರೆಯಲ್ಲಿ ಜನರನ್ನು ಮನವೊಲಿಸುವ ಮೂಲಕ ಮತದಾನ ಹೆಚ್ಚಿಸ ಬೇಕು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ನಿಮಗೆ ಇಷ್ಟವಾದ ಅಭ್ಯರ್ಥಿಗಳಿಗೆ ಮತಚಲಾಯಿಸಬಹುದು ಒಂದು ವೇಳೆ ಯಾರು ಇಷ್ಟವಾದಲ್ಲಿ ನೋಡ ಬಟನ್ಗೆ ಒತ್ತುವಂತೆ ವಿಧಾನಸಭಾ ಚುನಾವಣೆಯಲ್ಲಿಎಲ್ಲ ಸಿಬ್ಬಂದಿ ಹಾಗೂ ಪ್ರಜ್ಞಾವಂತ ನಾಗರಿಕರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ತಿಳಿಸಿದರು,
ಪೌರಾಯುಕ್ತ ರಾಮಕೃಷ್ಣ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಸೋಂಕನ್ನು ತಡೆಯಲು ಆಶಾ. ಅಂಗನವಾಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಸಿಬ್ಬಂದಿಗಳು ಸೈನಿಕರಂತೆ ಕೆಲಸ ಮಾಡಿ ಸೋಂಕು ತಡೆಯಲು ಹೇಗೆ ಶ್ರಮವಹಿಸಿ ಕರ್ತವ್ಯ ನಿರ್ವಹಿಸಿದ್ದೆವೆ ಅದೇ ರೀತಿ ಚುನಾವಣೆಯಲ್ಲಿ ಮತದಾನ ಹೆಚ್ಚಿಸಲು ಎಲ್ಲರ ಸಹಕಾರ ಅಗತ್ಯ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಬಿಸಿಎಂ ಅಧಿಕಾರಿ ದಿವಾಕರ್ ಎಸ್ಟಿ ಇಲಾಖೆಯ ಶಿವರಾಜ್, ಶಿಶುಅಭಿವೃದ್ಧಿ ಅಧಿಕಾರಿ ಹರಿಪ್ರಸಾದ್, ತಾಪಂ ಸಹಾಯಕ ನಿರ್ದೇಶಕ ಸಂಪತ್, ಯೋಜನಾ ನಿರ್ದೇಶಕ ದಿವಾಕರ್ ,ಆರೋಗ್ಯ ಇಲಾಖೆಯ ತಿಪ್ಪೇಸ್ವಾಮಿ ಇತರರಿದ್ದರು.
ನಗರದ ತಾಲೂಕು ಪಂಚಾಯಾತ್ ಕಚೇರಿಯಿಂದ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ನೆಹರು ವೃತ್ತದಲ್ಲಿ ಮತದಾನ ಜಾಗೃತಿ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
0 Comments