ಪ್ರದಾನಿ ನರೇಂದ್ರಮೋದಿ ಭೇಟಿ ನೀಡಿ4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಸಿ.ಎಂ.ಸಿದ್ದರಾಮಯ್ಯ ಮನವಿ.

by | 19/12/23 | ಬರ ಅಧ್ಯಯನ

ದೆಹಲಿ ಡಿ.19ಮುಖ್ಯಮಂತ್ರಿ Siddaramaiah ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದೇನೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ.
ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೇನೆ.

#DroughtReliefFund #NarendraModi

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page