ಚಳ್ಳಕೆರೆ ಅ.13.ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹೆಚ್ಚಿನ ಪ್ರಚಾರ ಮಾಡುವಂತೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಪಂ ಇ ಒ ಹೊನ್ನಯ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎಲ್ಲಾ ಗ್ರಾಪಂ ಪಿಡಿಒ ಗಳಿಗೆ ಪಿಎಂ ವಿಶ್ವಕರ್ಮ ಯೋಜನೆಯ ಅನುಷ್ಠಾನ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನಗೆ ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಹಾಗೂ ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ನೊಂದಾಯಿಕೊಳ್ಳುವಂತೆ ತಿಳಿಸಿದರು.
ಪಿಎಂ ವಿಶ್ವಕರ್ಮ
ಯೋಜನೆಯ ಬಗ್ಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಟೋ ಹಾಗೂ ಡಂಗೂರ ಹೊಡಿಸುವ , ಕಸವನ್ನು ಸಂಗ್ರಹಣೆ ಮಾಡುವ ವಾಹನಗಳ ಮೂಲಕ ಜನರಲ್ಲಿ ಹೆಚ್ಚಿನ ಯೋಜನೆಯ ಬಗ್ಗೆ ಅರಿವು ಮೂಡಿಸಬೇಕು. ಸಿ.ಎಸ್.ಆರ್ ಸೆಂಟರ್ಗಳನ್ನು ತೆರೆದು ಅರ್ಹ ಫಲಾನುಭವಿಗಳು ಹೆಚ್ಚು ನೋಂದಣಿಯಾಗುವಂತೆ ಮಾಡಬೇಕು.
ಸಂಬಂಧಪಟ್ಟ ಸಂಘ – ಸಂಸ್ಥೆಗಳಿಗೆ ಹಾಗೂ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆಯ ನೊಂದಣಿಯಾಗುವಂತೆ ತಿಳಿಹೇಳಬೇಕು ಎಂದು ಹೇಳಿದರು. ಈ ಯೋಜನೆಯ ಫಲಾನುಭವಿಗಳ ನೋಂದಣಿ ಮಾಡುವುದಕ್ಕಾಗಿ ಒಂದು ತಂಡವನ್ನು ಮಾಡಿ , ಒಂದು ವಾರದೊಳಗೆ ಪೂರ್ಣಗೊಳಿಸಬೇಕು.
ಕೇಂದ್ರ ಸರ್ಕಾರದ ವಿಶ್ವಕರ್ಮ ಜನಾಂಗದವರಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯನ್ನು ತಮ್ಮ ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಕರಕುಶಲಿಗರು ಮತ್ತು ಕುಶಲಕರ್ಮಿಗಳಿಗೆ ಸಂಪೂರ್ಣ ಬೆಂಬಲವನ್ನು ಒದಗಿಸಲು ಪ್ರಧಾನ ಮಂತ್ರಿಯವರು 17 ನೇ ಸೆಪ್ಟೆಂಬರ್ , 2023 ರಂದು ಪ್ರಾರಂಭಿಸಿದ್ದಾರೆ.
ಈ ಯೋಜನೆಯ 18 ರೀತಿಯ ವ್ಯಾಪಾರಗಳಲ್ಲಿ ತೊಡಗಿರುವ ಕರಕುಶಲಿಗರು ಮತ್ತು ಕುಶಲಕರ್ಮಿಗಳನ್ನು ಒಳಗೊಳ್ಳುತ್ತದೆ. ಅಂದರೆ ಬಡಗಿ , ದೋಣಿ ತಯಾರಕರು , ಕೃಷಿ ಸಲಕರಣೆಗಳು ತಯಾರಿಸುವವರು , ಕಮ್ಮಾರರು , ಸುತ್ತಿಗೆ ಮತ್ತು ಟೂಲ್ ಕಿಟ್ ಮಾಡುವವರು . ಬೀಗ ತಯಾರಿಸುವವರು , ಅಕ್ಕಸಾಲಿಗರು , ಕುಂಬಾರರು , ಶಿಲ್ಪಿಗಳು , ಕಲ್ಲು ಒಡೆಯುವವರು , ಚಮ್ಮಾರರು , ಮೇಸ್ತ್ರಿ , ಬುಟ್ಟಿ / ಚಾಪೆ / ಪೊರಕೆ / ಸೆಣಬು ನೇಯುವವರು , ಸಾಂಪ್ರದಾಯಿಕ ಗೊಂಬೆ ಮತ್ತು ಆಟಿಕೆ ತಯಾರಕರು , ಕ್ಷೌರಿಕರು , ಹೂಮಾಲೆ ತಯಾರಕರು , ಮಡಿವಾಳರು , ಟೈಲರ್ ಮತ್ತು ಮೀನಿನ ಬಲೆಯ ತಯಾರಕರು ಈ ಯೋಜನೆಯ ಸದುಪಯೋಗ ಪಡಿಸಿಕೊಂಡು ಉದ್ದಿಮೆ ಅಭಿವೃದ್ದಿ ಮಾಡಿಕೊಂಡು ಆರ್ಥಿಕವಾಗೆ ಮುಂದೆ ಬರಲು ಸಹಕಾರಿಯಾಗಲಿದೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹರು ಯಾರೂ ಈ ಯೋಜನೆಯಿಂದ ವಂಚಿತರಾಗದಂತೆ ನೊಂದಾಯಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಪಂ ನರೇಗಾ ಸಹಾಯಕ ನಿರ್ದೇಶಕ ಸಂತೋಷ್. ಯೋಜನಾಧಿಕಾರಿ ದಿವಾಕರ್ ಪಿ ಎಂ ವಿಶ್ವಕರ್ಮ ಅಧಿಕಾರಿ ಶ್ರೀನಿವಾಸ್ ಹಾಗೂ ಗ್ರಾಪಂ ಪಿಡಿಒಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments