ಪ್ರಧಾನಿ ನರೇಂದ್ರಮೋದಿ ಜೀ ಹಾಗೂ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಜೆ.ಪಿ.ನಡ್ಡಾ ಜೀ ಅವರಿಗೆ ಅಭಿನಂದನೆಗಳು – ಬಿ. ಸುರೇಶಗೌಡ ತುಮಕೂರು ಗ್ರಾಮಾಂತರ ಶಾಸಕ.

by | 03/12/23 | ರಾಜಕೀಯ


ತುಮಕೂರು ಡಿ.3
ಪ್ರಧಾನಿ ನರೇಂದ್ರಮೋದಿ ಜೀ ಹಾಗೂ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಜೆ.ಪಿ.ನಡ್ಡಾ ಜೀ ಅವರಿಗೆ ಅಭಿನಂದನೆಗಳು – ಬಿ. ಸುರೇಶಗೌಡ
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ
ಮೋದಿ ನೇತೃತ್ವದ ಅಭಿವೃದ್ಧಿಗೆ ಮನ್ನಣೆ- ಬಿ. ಸುರೇಶಗೌಡ ಕಾಂಗ್ರೆಸ್‌ನ ಹುಸಿ ಗ್ಯಾರಂಟಿಗಳಿಗೆ ತಿರಸ್ಕಾರ -ಬಿ.ಸುರೇಶಗೌಡ ತುಮಕೂರು : ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸಗಡ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು ಈ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಬಲ ನಾಯಕತ್ವಕ್ಕೆ ಮತ್ತು ಅವರ ನೇತೃತ್ವದ ಅಭಿವೃದ್ಧಿ ಯೋಜನೆಗಳಿಗೆ ಕೊಟ್ಟ ಜನಾದೇಶವಾಗಿದೆ. ಈ ಫಲಿತಾಂಶದ ಮೂಲಕ ಜನರು ಕಾಂಗ್ರೆಸ್‌ ಪ್ರಣೀತ ಹುಸಿ ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿದ್ದಾರೆ ಎಂದು ಶಾಸಕ ಬಿ. ಸುರೇಶಗೌಡ ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಇಡೀ ದೇಶದಾದ್ಯಂತ ಸಾಧಿಸಲಿರುವ ದಿಗ್ವಿಜಯಕ್ಕೆ ಇದು ಮುನ್ನುಡಿಯಂತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದಿದೆ. ರಾಜಸ್ತಾನ ಮತ್ತು ಛತ್ತೀಸಗಡದಲ್ಲಿ ಜನರು ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಬಿಜೆಪಿಗೆ ಮರಳಿ ಅಧಿಕಾರ ಕೊಟ್ಟಿದ್ದಾರೆ. ಅಂದರೆ ಇದು ಬಿಜೆಪಿಗೆ ಸಿಕ್ಕ ಸಕಾರಾತ್ಮಕ ಜಯವಾಗಿದೆ ಮತ್ತು ಇದುವರೆಗೆ ಕಾಂಗ್ರೆಸ್‌ ಪಕ್ಷ ಮಾಡಿಕೊಂಡಿರುವ ಬಂದಿರುವ ನಕಾರಾತ್ಮಕ ರಾಜಕಾರಣವನ್ನು ಜನರು ಧಿಕ್ಕರಿಸಿರುವುದರ ದ್ಯೋತಕವಾಗಿದೆ.
ಭಾರತ ದೇಶವನ್ನು ಜಾಗತಿಕ ಐದು ಬಲಿಷ್ಠ ಆರ್ಥಿಕತೆಗಳಲ್ಲಿ ಒಂದಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಕೀರ್ತಿಯನ್ನು ಪ್ರಪಂಚದ ಬಲಿಷ್ಠ ರಾಷ್ಟ್ರಗಳ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರ ಜತೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಕೈ ಜೋಡಿಸಿ ರೂಪಿಸಿದ ಚುನಾವಣಾ ಕಾರ್ಯತಂತ್ರ ಕಾಂಗ್ರೆಸ್‌ ಮಾತ್ರವಲ್ಲ ಇತರ ಎಲ್ಲ ವಿರೋಧ ಪಕ್ಷಗಳಿಗೆ ಮರ್ಮಾಘಾತ ಕೊಟ್ಟಿದೆ. ಇಂಥ ಅಮೋಘ ಗೆಲುವನ್ನು ಸಾಧ್ಯ ಮಾಡಿದ ಈ ಮೂವರು ಅಪ್ರತಿಮ ನಾಯಕರಿಗೂ ಹಾರ್ದಿಕ ಅಭಿನಂದನೆಗಳು.
ಕಾಂಗ್ರೆಸ್‌ ಪಕ್ಷವು ಕೊಟ್ಟ ಸುಳ್ಳು ಗ್ಯಾರಂಟಿ ಯೋಜನೆಗಳಿಗೆ ಜನರು ಮರುಳಾಗಲಿಲ್ಲ. ದೇಶದ ಅಭಿವೃದ್ಧಿ ಮುಖ್ಯ, ದುಡಿಯುವ ಕೈಗಳಿಗೆ ಕೆಲಸ ಮುಖ್ಯ ಎಂಬುದನ್ನು ಅವರು ಈ ಫಲಿತಾಂಶದ ಮೂಲಕ ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳಿಗೆ ಸಾರಿ ಹೇಳಿದ್ದಾರೆ.
ಕಾಂಗ್ರೆಸ್‌ನ ನಾಯಕರಾದ ರಾಹುಲ್‌ ಗಾಂಧಿಯವರು ಚುನಾವಣಾ ಸಮಯದಲ್ಲಿ ಪ್ರಧಾನಿಯವರ ವಿರುದ್ಧ ʻದುರದೃಷ್ಟ (ಪನೌತಿ)ʼ ಎಂಬ ಹೊಣೆಗೇಡಿತನದ ಟೀಕೆ ಮಾಡಿದ್ದರು. ಈಗ ಸ್ವತಃ ರಾಹುಲ್‌ ಗಾಂಧಿಯವರು ತಮ್ಮ ಪಕ್ಷಕ್ಕೆ ಎಂಥ ʼದುರದೃಷ್ಟʼ ಎಂಬುದು ಸಾಬೀತಾಗಿದೆ.
ಅವರು, ಅವರ ಸೋದರಿ ಪ್ರಿಯಾಂಕ ಮತ್ತು ಅವರ ತಾಯಿ ಸೋನಿಯಾ ಗಾಂಧಿಯವರು ಕಾಂಗ್ರೆಸ್‌ ಪಕ್ಷಕ್ಕೆ ಯಾವ ಗೆಲುವನ್ನೂ ತಂದುಕೊಡಲು ಸಾಧ್ಯವಾಗಿಲ್ಲ. ಅದಕ್ಕೆ ಅವರು ಮಾಡುತ್ತಿರುವ ನಕಾರಾತ್ಮಕ ರಾಜಕೀಯವೇ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ವೈಯಕ್ತಿಕ ಮತ್ತು ನಿರಾಧಾರದ ಆರೋಪಗಳನ್ನು ಜನರು ಸಹಿಸುವುದಿಲ್ಲ ಎಂದು ಇನ್ನಾದರೂ ಕೇಂದ್ರದ ಮತ್ತು ರಾಜ್ಯದ ಕಾಂಗ್ರೆಸ್‌ ನಾಯಕರು ಅರ್ಥ ಮಾಡಿಕೊಳ್ಳಬೇಕು.
ರಾಜಸ್ಥಾನ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಒಳಜಗಳ, ಅಧಿಕಾರಕ್ಕಾಗಿ ನಡೆದ ಕಚ್ಚಾಟ ಆ ಪಕ್ಷಕ್ಕೆ ಮುಳುವಾಗಿದೆ. ಇಲ್ಲಿಯೂ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಅದೇ ಮುಸುಕಿನ ಗುದ್ದಾಟ ನಡೆದಿದೆ. ಅದು ಅವರ ಪಕ್ಷಕ್ಕೆ ಮುಳುವಾಗಲಿದೆ.ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತವು ಜನರನ್ನು ಭ್ರಮ ನಿರಸನದಲ್ಲಿ ಮುಳುಗಿಸಿದೆ. ಯಾಕಾದರೂ ನಾವು ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದೆವು ಎಂದು ಪರಿತಾಪ ಪಡುತ್ತಿದ್ದಾರೆ. ಅವರ ಸಿಟ್ಟು ಮತ್ತು ಆಕ್ರೋಶ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವ್ಯಕ್ತವಾಗಲಿದೆ. ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸಗಡ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ಹೊಸ ಹುರುಪನ್ನು ಮತ್ತು ಹುಮ್ಮಸ್ಸನ್ನು ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಾದಿಯಾಗಿ ಎಲ್ಲ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕರ್ನಾಟಕದ ಎಲ್ಲ ಇಪ್ಪತ್ತೆಂಟು ಸೀಟುಗಳಲ್ಲಿ ಕಾಂಗ್ರೆಸ್‌ ಅನ್ನು ಪರಾಜಯಗೊಳಿಸಿ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆ ಮೂಲಕ ನಾವು ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜೆ.ಪಿ.ನಡ್ಡಾ ಅವರ ಕೈ ಬಲಪಡಿಸುತ್ತೇವೆ ಎಂದಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page