ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದಕಾರಜೋಳ ರನ್ನು ಗೆಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ.

by | 13/04/24 | ಲೋಕಸಭಾ ಚುನಾವಣೆ-2024

ಚಳ್ಳಕೆರೆ ಏ.13 ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದಕಾರಜೋಳ ರನ್ನು ಗೆಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದ ಶ್ರೀಗುರುರಾಘವೇಂದ್ರಕಲ್ಯಾಣಮಂಟಪದಲ್ಲಿ ಮಾಜಿ ಸಚಿವ ದಿ.ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಲೋಕಸಭಾ ಕ್ಷೇತ್ರದ ಪರ ಮತಯಾಚನೆ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪರ ಗಾಳಿ ದಿನ ದಿನಕ್ಕೂ ಬಿರುಗಾಳಿಯಾಗಿ ಬೀಸುತ್ತಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಕಾಂಗ್ರೆಸ್ ಮುಳುಗುವ ಹಡಗಾಗಿದ್ದು ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆಯಾಗಿ ಕುಟುಂಬದಂತೆ ಕೆಲಸ ಮಾಡುತ್ತಿದ್ದು . ವಿಶ್ವದಲ್ಲೇ ಮೋದಿನ್ನು ಕೊಂಡಾಡುತ್ತಿರುವುದರಿಂದ ಯಾರಿಂದಲೂ ಮೋದಿಯವರನ್ನು ಸೋಲಿಸಲು ಸಾಧ್ಯವಿಲ್ಲ ಗೋವಿಂದ ಕಾರಜೋಳ್ ಗೆ ಮತ ನೀಡುವ ಮೂಲಕ ಅವರ ಕೈ ಬಲಪಡಿಸ ಬೇಕು ನಾನು ಸಿ ಎಂ ಆಗಿದ್ದಾಗ ಭಾಗ್ಯಲಕ್ಷ್ಮಿ.ಕಿಸಾನ್ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳೀತ ನೀಡಿದ್ದೇನೆ.ಈಗ ಬಲಾವಣೆ ಗಾಳಿ ಬೀಸುತ್ತಿದೆ. ಕೆ.ಟಿ.ಕುಮಾರಸ್ವಾಮಿ ಬಿಜೆಗೆ ಸೇರಿರುವುದು ಆನೆ ಭಲ ಸಿಕ್ಕಾಂತಾಗಿದೆ ಮೋದೀಜಿಗೆ ಶಕ್ತಿ ತುಂಬಲು ಲೋಕಸಭಾ ಚುನಾವಣೆಯಲ್ಲಿ ಗೋವಿಂದಕಾರಜೋಳ ಇವರಿಗೆ ಮತನೀಡುವಂತೆ ಮನವಿ ಮಾಡಿದರು.

ಮಾಜಿ ಸಚಿವ ಹಾಲಿ ಶಾಸಕ ಜನಾರ್ದನ ರೆಡ್ಡಿ ಮಾತನಾಡಿ ದೇಶದ ಪ್ರಧಾನಿಯಾಗಲು ಬೇರೆಯವರಿಗೆ ಯಾರಿಗೂ ತಾಕತ್ತಿಲ್ಲ ಅದು ಮೋದಿಯವರಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ಅದು ಕಸದ ಡಬ್ಬಿಗೆ ಸಮಾನ ಆದ್ದರಿಂದ ದೇಶದ ರಕ್ಷಣೆಗಾಗಿ ಸೈನಿಕರ ಜತೆ ದೀಪಾವಳಿ ಆಚರಣೆ ಮಾಡುವ ಮೂಲಕ ದೇಶಕ್ಕೆ ಹೆಚ್ಚಿನ ಭದ್ರತೆ ನೀಡಿದ ಮೋದೀಜಿಯವರು ಮತ್ತೊಮ್ಮೆ ಪ್ರಧಾನಿ ಯಾಗಲು ಗೋವಿಂದಕಾರಜೋಳಗೆ ಮತ ನೀಡಿ ಯಡಿಯೂರಪ್ಪ ಮುಖ್ಯಮಂತ್ರಿ ಅವದಿಯಲ್ಲಿ ಉತ್ತಮ ಮಳೆ ಬೆಳೆಯಾಗುತ್ತಿತ್ತು ಈಗ ಜಿಲ್ಲೆ ಮಾಜಿ ಮುಖ್ಯಮಂತ್ರಿಯಡೀಯೂರಪ್ಪ ಕಾಲಿಡುವ ಮುನ್ನವೇ ಅವರ ಕಾಲ್ಗುಣದಿಂದ ಮೋಡ ಮುಸುಕಿತ ತಂಪಾದ ಗಾಳಿ ಹಾಗೂ ಮಳೆಯಾಗಿರುವಯದು ಮತ್ತೆ ಬಿಜೆಪಿ ಹಲೆ ಇದೆ ಎಂಬುದಕ್ಕೆ ಶುಭ ಸೂಚನೆಯಾಗಿದೆ ಸುಳ್ಳಿನ ಭರವಸೆಯ ಗ್ಯಾರೆಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಮಗ್ರೆಸ್ ಸರಕಾರ ದಿವಾಳಿಯ ಅಂಚಿನಲ್ಲಿದೆ ಗ್ಯಾರೆಂಟಿಗಳನ್ನು ನಂಬಿ ಕಾಂಗ್ರೆಸ್ ಗೆ ಮತ ನೀಡದೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಮಾಜಿ ಸಚಿವ ದಿ.ತಿಪ್ಪೇಸ್ವಾಮಿಯ ಪುತ್ರ ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಪಕ್ಷಕ್ಕೆ ಸೇರದಪಡೆಯಾಗಿ ಮಾತನಾಡಿ ನನ್ನ ಪೂಜ್ಯ ತಂದೆಯವರು ಯಡಿಯೂರಪ್ಪನವರ ಕೈಬಲಪಡಿಸಲು ಜೆಡಿಎಸ್ ಪಕ್ಷತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಬಿಜೆಪಿ ಶಾಸಕರಾಗಿದ್ದರು ಅದೇ ಮಾರ್ಗದಲ್ಲಿ ಈಗ ನಾನೂ ಸಹ ಯಡಿಯೂರಪ್ಪನವರ ಹಾಗೂ ಮೋದೀಜಿಯವರ ಕೈಬಲ ಪಡಿಸಲು ಅವರ ಯಡಿಯೂರಪ್ಪನ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿದ್ದೇನೆ ಎಲ್ಲಾ ಕಾರ್ಯಕರ್ಯರು ಬಿಜೆಪಿ ಪಕ್ಷದ ಗೆಲುವಿಗಾಗಿ ಶ್ರಮಿಸ ಬೇಕಿದೆ ಎಂದು ತಿಳಿಸಿದರು. ಮಾಜಿ ಸಚಿವ ಬಸವರಾಯರೆಡ್ಡಿ. ವಿಧಾನ ಪರಿಷತ್ ಸದಸ್ಯ ನವೀನ್. ಮಂಡಲ ಅಧ್ಯಕ್ಷ ಸೂರನಹಳ್ಳಿಶ್ರೀನಿವಾಸ್ ಮಾತನಾಡಿದರು. ಮಾಜಿ ಶಾಸಕರಾದ ತಿಪ್ಪಾರೆಡ್ಡಿ. ಬಸವರಾಜ್ ಮಂಡಿಮಠ್. ರಾಮದಾಸ್. ಜಯಪಾಲಯ್ಯ. ಅನಿಲ್ ಕುಮಾರ್. ಲಿಂಗದೇವರು. ನಗರಸಭೆ ಸದಸ್ಯರಾದ ಜಯಣ್ಣ. ಪಾಲಮ್ಮ .ವೆಂಕಟೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page