ಪ್ರಭಾಕರ ಮ್ಯಾಸನಾಯಕ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯ ಅಂತರಾಳದ ಮಾತು

by | 27/02/23 | ವೈರಲ್

ಆತ್ಮೀಯರೇ..

ಕೊನೆಗಳಿಗೆ ತನಕ ಹೋರಾಟ ಮಾಡಿದ್ದರ ಫಲವಾಗಿ ಅಭಿಮನ್ಯುವಿಗೆ ಶೂರ ಎಂಬ ಬಿರುದು ಬಂತು ಎಂದು ಕೇಳಿದ್ದೇವೆ. ಅಭಿಮನ್ಯು ನನಗೆ ಪ್ರೇರಣೆ. ಅದೇ ರೀತಿ ಮಾಡಿದಷ್ಟು ನೀಡುಭಿಕ್ಷೆಯ ಶ್ರೀಕ್ಷೇತ್ರ ಇರುವುದು ಕೂಡ ಮೊಳಕಾಲ್ಮೂರು ಕ್ಷೇತ್ರದಲ್ಲಿ. ಇಲ್ಲಿ ಕಳೆದ 10 ವರ್ಷಗಳಿಂದ ನಿರಂತರವಾಗಿ ಸೇವಾಕಾರ್ಯ ಕೈಗೊಂಡಿದ್ದೇನೆ. ನನ್ನ ಪರಿಶ್ರಮಕ್ಕೆ ಭಗವಂತ ಕೈ ಹಿಡಿದು ನಡೆಸುತ್ತಾನೆ ಎಂಬ ಅಚಲ ನಂಬಿಕೆ ನನ್ನದು. ಈಗಲೂ ಕ್ಷೇತ್ರದ ಜನರೊಡನೆ ಇದ್ದೇನೆ, ಮುಂದೆಯೂ ಇರುತ್ತೇನೆ.ನನ್ನ ನೋಡಿ ನಗುವವರು ಆಡಿಕೊಳ್ಳುವವರು, ಕಿಚಾಯಿಸುವವರು ಹಾಗೂ ನನಗೆ ಮಾಡುತ್ತಿರುವ ಅಪಮಾನ ಅವಮಾನಗಳು ಎಲ್ಲವೂ ನನಗೆ ಪ್ರೇರಣೆಯಾಗಿದೆ.
ಇವೆಲ್ಲವೂ ನನ್ನನ್ನು ಮತ್ತಷ್ಟು ಸದೃಢನನ್ನಾಗಿಸಿದೆ. ನನಗೆ ಅಪಮಾನ ಅವಮಾನ ಮಾಡುತ್ತಿರುವ ಎಲ್ಲರನ್ನು ಬಸವಣ್ಣನವರ ಹೇಳಿರುವ ವಚನದಂತೆ ಜರಿದವರೆನ್ನ ಜನ್ಮ ಬಂಧುಗಳೆಂಬಂತೆ ಅತ್ಯಂತ ಸ್ನೇಹಭಾವದಿಂದ ಸ್ವೀಕರಿಸಿದ್ದೇನೆ.
ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿರುವಂತೆ *ಕನಸಿನ ಗುರಿ ಕೇಳಿ ಜನ ಇವನೊಬ್ಬ ಹುಚ್ಚ ಎನ್ನಬೇಕು ಗುರಿ ತಲುಪಿದ ಮೇಲೆ ನೋಡಿ ನಗಾಡಿರುವವರು ಹುಚ್ಚರಾಗಬೇಕು* ಇವು ನನಗೆ ಆದರ್ಶ ನುಡಿಗಳು ಕ್ಷೇತ್ರದಲ್ಲಿ ನನ್ನ ಗುರಿ ತಲುಪುತ್ತೇನೆ. ನನ್ನ ಮಾತೃಸಮಾನ ಪಕ್ಷ ಈ ಬಾರಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ವಿಶ್ವಾಸವಿದೆ. ಮತದಾರ ದೇವರುಗಳ ಆಶೀರ್ವಾದದಿಂದ ಶಾಸಕನಾಗುತ್ತೇನೆ ಎಂಬ ಅಧಮ್ಯ ವಿಶ್ವಾಸ ನನ್ನದು. ಇದಕ್ಕೆ ಕ್ಷೇತ್ರದ ಜನರ ಸಹಕಾರ ಕೋರುತ್ತೇನೆ. ಮಹಾತ್ಮ ಗಾಂಧೀಜಿ ಅವರು ಉಪ್ಪಿನ ಸತ್ಯಾಗ್ರಹ ಆರಂಭ ಮಾಡಿದಾಗ ಹಿಂದೆ ಬಂದವರು ಕೇವಲ ಮೂರು ಜನ ಮಾತ್ರ ಹಾಗೆ ಶಿವಾಜಿ ಮಹಾರಾಜರು ಸೈನ್ಯ ಕಟ್ಟಲು ಹೊರಟಾಗ ಸಿಕ್ಕಿದ್ದು ಹಸು ಮೇಯಿಸುವ ನಾಲ್ಕಾರು ಹುಡುಗರು ಮಾತ್ರ. ಇವರ್ಯಾರು ಎದೆಗುಂದದೆ ಸೈನ್ಯ ಕಟ್ಟಿ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ. ಹಾಗೆ ನಾನು ಕೂಡ ಶುಭೋದಯ ಕಾರ್ಯಕ್ರಮ ಮುಖೇನ ಕ್ಷೇತ್ರದಾದ್ಯಂತ ಸಂಚರಿಸಿ ಜನರ ಮನಸ್ಸನ್ನು ಗೆಲ್ಲುತ್ತೇನೆ. *ನನ್ನ ತಾಯಿ ನನಗೆ ಕಲಿಸಿಕೊಟ್ಟ ಸಂಸ್ಕಾರ*
ಯಾರಿಗೂ ನೋವುಂಟು ಮಾಡಬೇಡ ಯಾರಿಗೂ ಕೆಡಕು ಬಯಸಬೇಡ ಎಂದು ನನ್ನ ತಾಯಿ ಅನಕ್ಷರಸ್ಥೆ ಆದರೂ ಮೇಲಿನಂತೆ ಸದಾ ಹೇಳುತ್ತಿದ್ದರು. ಅಣ್ಣ ಶ್ರೀರಾಮುಲು ಅವರ ಬಗ್ಗೆ ಆವೇಶದಲ್ಲಿ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ಇತ್ತೀಚೆಗೆ ಸ್ನೇಹಿತನೋರ್ವ ಒಂದು ಆಡಿಯೋ ಒಂದು ವೈರಲ್ ಮಾಡಿದ್ದರು. ಅದು ನನ್ನನ್ನು ಮಾನಸಿಕವಾಗಿ ಬಹಳ ನೋಯಿಸಿದೆ. ಇದು ಉದ್ದೇಶಪೂರ್ವಕವಾಗಿ ಮಾತನಾಡಿದ್ದಲ್ಲ. ಯಾರು ಈ ಬಗ್ಗೆ ಅನ್ಯತಾಭಾವಿಸಬಾರದು ಈ ಬಗ್ಗೆ ಅವರಲ್ಲಿ ಹಾಗು ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದೇನೆ ಪಕ್ಷದಲ್ಲಿರುವ ಎಲ್ಲರೂ ಅಣ್ಣ ತಮ್ಮಂದಿರು, ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯೋಣ ಪಕ್ಷ ಗೆಲ್ಲಿಸೋಣ ಎಂದು ಆಶಿಸುತ್ತಾ ನಿಮ್ಮೆಲ್ಲರ ಸಹಕಾರದ ನಿರೀಕ್ಷೆಯಲ್ಲಿ

ಇಂತಿ ನಿಮ್ಮ ಪ್ರೀತಿಯ
ಪ್ರಭಾಕರ ಮ್ಯಾಸನಾಯಕ
ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page