ಚಳ್ಳಕೆರೆ ಜನಧ್ವನಿ ವಾರ್ತೆ 20
ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ಕೆಎಎಸ್ ಅಧಿಕಾರಿ ಪ್ರಸ್ತುತ ಸ್ಥಳ ನಿರೀಕ್ಷೆಣೆಯಲ್ಲಿದ್ದ ತಹಶೀಲ್ದಾರ್ ಎನ್.ರಘುಮೂರ್ತಿ ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಸುಮಾರು ೨ ವರ್ಷಗಳ ಕಾಲ ತಹಶೀಲ್ದಾರ್ ಹುದ್ದೆಯಲ್ಲಿ ಸೇವೆ ಸಲ್ಲಿಸಿ ವೈಯುಕ್ತಿಕ ಕಾರಣಗಳಿಂದ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು. ತಹಶೀಲ್ದಾರ್ ಗ್ರೇಡ್-೨ ವೃಂದ ಎನ್.ರಘುಮುರ್ತಿ ವಿರುದ್ದ ವಿವಿಧ ಪ್ರಕರಣಗಳು ಬಾಕಿ ಉಳಿದಿದ್ದು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರಿಂದ ಸರ್ಕಾರ ಷರತ್ತುಬದ್ಧವಾಗಿ ರಾಜಿನಾಮೆ ಅಂಗೀಕಾರ ಮಾಡಲಾಗಿದೆ. ಅವರ ವಿರುದ್ಧ ಕ್ರಿಮಿನಲ್, ಸಿವಿಲ್ ,ನ್ಯಾಯಾಲಯದ ಮೊಕದ್ದಮೆಗಳು ಬಾಕಿಯಿದ್ದು, ವಯಕ್ತಿಕ ಕಾರಣಗಳ ಆಧಾರದ ಮೇಲೆ ರಾಜಿನಾಮೆ ಅಂಗೀಕರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.
0 Comments