ಚಳ್ಳಕೆರೆ ಡಿ.20. ವಿದ್ಯು ಅವಘಡಕ್ಕೆ ಕಾದು ಕುಳಿತ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ತಂತಿಗಳು. ಹೌದು ಇದು ತಳಕು ಹೋಬಳಿ ವ್ಯಾಪ್ತಿಯ ಘಟರ್ತಿ ಗ್ರಾಪಂ ವ್ಯಾಪ್ತಿಗೆ ಸೇರಿದ ಚನ್ನಗಾನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಂದಿಕೊಂಡಿರುವ ವಿದ್ಯುತ್ ಪರಿವರ್ತಕ ಹಾಗೂ ಮನೆಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳು ಹಬ್ಬ ಹರಿದಿಗಳಲ್ಲಿ ಮನೆಗೆ ಸುಣ್ಣ ಬಣ್ಣ ಬಳಿಯುವಾಗ ಸ್ವಲ್ಪ ಎಚ್ಚರ ತಪ್ಪಿದರೂ ವಿದ್ಯುತ್ ಅವಗಡಕ್ಕೆ ಸಿಲುಕಿ ಪ್ರಾಣ ಕಳೆದು ಕೊಳ್ಳುವುದು ಖಚಿತ ಮನೆ ಮುಂದೆ ಹಾಗೂ ಶಾಲಾ ವಿದ್ಯರ್ಥಿಗಳ ಆಟವಾಡುವಾಗ ವಿದ್ಯುತ್ ಕಂಬ ಮುಟ್ಟಿದರೂ ವಿದ್ಯುತ್ ಅವಘಡ ಕಟ್ಟಿಟ್ಟ ಬುತ್ತಿಯಾಗಿದ್ದು ಇಲ್ಲಿನ ಜನರು ಮಳೆ.ಗಾಳಿ ಬೀಸುವಾಗ ಪ್ರಾಣ ಭೀತಿಯಲ್ಲಿ ಜೀವನ ಸಾಗಿಸುವಂತಾಗಿದ್ದು ಸುಮಾರು ವರ್ಷಗಳಿಂದ ಇದೇ ರೀತಿ ಇದ್ದು ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ತಿಳಿಸಿದರೂ ಇವತ್ತು ನಾಳೆ ಸರಿಮಾಡುತ್ತೇವೆ ಎಂಬ ಭರವಸೆ ನೀಡಿದರೂ ಸಹ ಪರ್ಯಾಯ ವ್ಯವಸ್ಥೆ ಮಾತ್ರ ಮಾಡಿಲ್ಲಿ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ.ಶಾಲೆಯ ಕಾಂಪೌಂಡ್ ಗೋಡೆಗೆ ಹೊಂದಿಕೊಂಡಿರುವ ವಿದ್ಯುತ್ ಪರಿವರ್ಕಕ ಸ್ಥಳಾಂತರಿಸುವರೇ ಕಾದು ನೋಡಬೇಕಿದೆ.
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments