ಚಳ್ಳಕೆರೆ ಫೆ.22:
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ, ಪ್ರಾದೇಶಿಕ ಕಚೇರಿ ಬಳ್ಳಾರಿ ವತಿಯಿಂದ “ನಿಧಿ ಆಪ್ಕೆ ನಿಕಟ್: ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ” ಕಾರ್ಯಕ್ರಮದ ವಿಸ್ತøತ ಮತ್ತು ಬಲಪಡಿಸಿದ ಆವೃತ್ತಿಯನ್ನು ಇದೇ ಫೆಬ್ರವರಿ 27ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಚಳ್ಳಕೆರೆಯ ಚೆಂಬರ್ ಆಫ್ ಕಾಮರ್ಸ್ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಯಮಕ್ಕೆ ವಿಶಾಲ ವೇದಿಕೆಯಾಗಿ ಅರಿವು ಮೂಡಿಸುವ ಮತ್ತು ಪ್ರಭಾವ ಬೀರುವ ಕಾರ್ಯಕ್ರಮವಾಗಿದೆ. ಉದ್ಯೋಗದಾತರ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು, ಸುಧಾರಣೆಗಳ ಮಾಹಿತಿ ಒದಗಿಸಲಾಗುವುದಚು ಕೂಡ ಕಾರ್ಯಕ್ರಮದ ಭಾಗವಾಗಿದೆ.
ಎಲ್ಲಾ ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಫೆ.27ರಂದು ಚಳ್ಳಕೆರೆಯ ಚೆಂಬರ್ ಆಫ್ ಕಾಮರ್ಸ್ ಹಾಲ್ನಲ್ಲಿ ನಡೆಯುವ “ನಿಧಿ ಆಪ್ಕೆ ನಿಕಟ್: ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ” ಕಾರ್ಯಕ್ರಮಕ್ಕೆ ಹಾಜರಾಗಿ ಪ್ರಯೋಜನ ಪಡೆಯಬೇಕು ಎಂದು ಬಳ್ಳಾರಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments