ಚಳ್ಳಕೆರೆ ಫೆ 2 ಭದ್ರಾ ಮೇಲ್ದಾಂಡೆ ಯೋಜನೆಯ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲುವಿಳಂಭ ಮಾಡುತ್ತಿರುವ ಸರಕಾರಗಳ ವಿರುದ್ದ ಫೆ 9 ರಂದು ಚಳ್ಳಕೆರೆ ಬಂದ್ ಪ್ರತಿಭಟನೆ ಹಮ್ಮಿಕೊಂಡಿದ್ದು ರೈತರು, ಕಾರ್ಮಿಕರು. ವಿವಿಧ ಸಂಘನೆಗಳು , ಜನಪ್ರತಿನಿಧಿಗಳು ಪಕ್ಷ ಬೇದ ಮರೆದು ಪ್ರತಿಭಟೆನೆ ಬೆಂಬಲ ನೀಡುವಂತೆ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಲಿಂಗಾರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳು ಮುಖಂಡರು ಸಹಯೋಗದೊಂದಿಗೆ ಹಮ್ಮಿಕೊಂಡಿ ಭದ್ರಾ ಮೇಲ್ದಂಡೆ ಯೋಜನೆ ಪ್ರತಿ ಭಟನೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದಶಗಳಿಗೆ ನೀರೊದಗಿ ಸುವ ರಾಜ್ಯ ಸರ್ಕಾರದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ರಾಷ್ಟ್ರೀಯ ಯೋಜನೆ ಎಂದು ಘೋಷಿಣೆ ಮಾಡಿ 5,300 ಕೋಟಿ ಹಣ ಒದಗಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೂ ಯಾವುದೇ ಹಣ
ಬಿಡುಗಡೆಯಾಗಿಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ತಕ್ಷಣವೇ
ಅನುದಾನ ಬಿಡುಗಡೆ ಮಾಡುವಂತೆ ಪ್ರತಿಭನೆಯ ಮೂಲಕ ಸರಕಾರಕಗಳಿಗೆ ಬಿಸಿ ಮುಟ್ಟಿಸ ಬೇಕು ಎಂದು ತಿಳಿಸಿದರು.
ರೈತರ ಮುಖಂಡ ಕೆ.ಪಿ.ಭೂತ್ಯ, ರೆಡ್ಡಿಹಳ್ಳಿ ವೀರಣ್ಣ, ಕಾರ್ಮಿಕ ಸಂಘನೆಯ ಮುಂಡರಾದ ಸಿ.ವೈ.ಶಿವರುದ್ರಪ್ಪ. ತಿಪ್ಪೇಸ್ವಾಮಿ ಸಮಾಜ ಸೇವಕ ಹೆಚ್.ಎಸ್. ಸೈಯಾದ್ ಮಾತನಾಡಿ
.ಬರದಿಂದಾಗಿ ತಾಲ್ಲೂಕಿನಲ್ಲಿ ಜನ, ಜಾನುವಾರು ಸಂಕಷ್ಟಕ್ಕೀಡಾಗಿದ್ದಾರೆ. ನೆರವಿಗೆ ಬರಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರಪರಿಹಾರ ಬೆಳೆವಿಮೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಪರಶುರಾಂಪುರ ಹೋಬಳಿ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರೂ ಅನುದಾನ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿವೆ. ಕೂಡಲೇ ಭದ್ರಾಮೇಲ್ದಾಂಡೆ ಯೋಜನೆಗೆ ಅನುದಾನ ,ಬರ ಪರಿಹಾರ ಕಾರ್ಯಗಳನ್ನು ಆರಂಭಿಸುವ ಜತೆಗೆ ಬೆಳೆನಷ್ಟ ಪರಿಹಾರ ಬಿಡುಗಡೆಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುವ ಮೂಲಕ ಸರಕಾರಗಳಿಗೆ ಬಿಸಿ ಮುಟ್ಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಭದ್ರಾ ಮೇಲ್ದಂಡೆ ಯೋಜನೆ ಸಮಿತಿ ಯಾದವರೆಡ್ಡಿ ಚಿಕ್ಕಪ್ಪನಹಳ್ಳಿ ಷಣ್ಮುಕಪ್ಪ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ. ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ರೈತರು ಭಾಗವಹಿಸಿದ್ದರು.
0 Comments