ಬಣ್ಣಬಣ್ಣದ ಚಿತ್ತಾರಗಳಿಂದ ಸಿಂಗಾರಗೊಳಿಸಿರುವ ನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯವನ್ನ ವೀಕ್ಷಿಸಿ, ಪ್ರಶಂಸಿಸಿದ ನ್ಯಾಯಾಧೀಶರಾದ ವಿಜಯ್.

by | 03/01/24 | ಸುದ್ದಿ


ಹಿರಿಯೂರು :
ನಗರದ ನಗರಸಭೆ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನೂತನವಾಗಿ ವಿವಿಧ ಬಣ್ಣಬಣ್ಣದ ಚಿತ್ತಾರಗಳಿಂದ ಅತ್ಯಂತ ಆಕರ್ಷಕವಾಗಿ ಸಿಂಗಾರಗೊಂಡಿರುವ ನಗರದ ಸಾರ್ವಜನಿಕ ಶೌಚಾಲಯಗಳನ್ನು ಹಿರಿಯಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಯುತ ಎಂ.ವಿಜಯ್ ರವರು ವೀಕ್ಷಣೆ ಮಾಡಿ, ನಗರಸಭೆ ಕಾರ್ಯವೈಖರಿ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಸಾರ್ವಜನಿಕ ಶೌಚಾಲಯಗಳನ್ನು ನಗರಸಭೆ ವತಿಯಿಂದ ಬಣ್ಣಬಣ್ಣದ ಚಿತ್ತಾರಗಳಿಂದ ಸಿಂಗಾರಗೊಳಿಸುವ ಮೂಲಕ ಅತ್ಯಂತ ಆಕರ್ಷಣೀಯವಾಗಿ ನಿರ್ಮಾಣಮಾಡಿದ್ದೀರಿ, ಆದರೆ ಈ ಶೌಚಾಲಯಗಳನ್ನು ಸಾರ್ವಜನಿಕರು ಬಳಸಿದ ನಂತರವೂ ಯಾವುದೇ ರೀತಿಯಲ್ಲಿ ಹಾಳಾಗದಂತೆ ಹಾಗೂ ಕೊಳಕಾಗದಂತೆ ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಕೆಲಸವಾಗಿದೆ ಎಂದರಲ್ಲದೆ,


ಸಾರ್ವಜನಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ಶೌಚಾಲಯಗಳನ್ನು ಬಣ್ಣಬಣ್ಣದ ಚಿತ್ರಗಳಿಂದ ಚಿತ್ತಾರಗಳಿಂದ ಸಿಂಗಾರಗೊಳಿಸಿರುವ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ರವರ ಸೃಜನಶೀಲತೆ, ಕ್ರೀಯಾಶೀಲತೆ, ಹಾಗೂ ಅವರ ಕಾರ್ಯವೈಖರಿ, ಅತ್ಯಂತ ಪ್ರಶಂಸನೀಯ, ಈ ಕಾರ್ಯದಲ್ಲಿ ಅವರ ಜೊತೆ ಕೈಜೋಡಿಸಿರುವ ನಗರಸಭೆಯ ಎಲ್ಲಾ ನೌಕರರು, ಸಿಬ್ಬಂದಿವರ್ಗ ಅಭಿನಂದಾನಾರ್ಹರು ಎಂಬುದಾಗಿ ಹೇಳಿದರು.
ಈ ಕುರಿತು ನ್ಯಾಯಾಧೀಶರಿಗೆ ಮಾಹಿತಿ ನೀಡಿದ ಪೌರಾಯುಕ್ತರಾದ ಮಹಂತೇಶ್ ರವರು ನಗರದಲ್ಲಿ ಸುಮಾರು 6 ಬೃಹತ್ ಸಾರ್ವಜನಿಕ ಶೌಚಾಲಯಗಳಿದ್ದು, ಅದರಲ್ಲಿ ಈಗ ಪ್ರಾಯೋಗಿಕವಾಗಿ ಮೊದಲು ಈ ಖಾಸಗಿ ಬಸ್ ನಿಲ್ದಾಣದ ಶೌಚಾಲಯವನ್ನು ಆಯ್ಕೆ ಮಾಡಿಕೊಂಡು ಸ್ವಚ್ಛಗೊಳಿಸಿ, ವಿವಿಧ ಕಲಾಕೃತಿಗಳಿಂದ ಸಿಂಗಾರಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹಂತಹಂತವಾಗಿ ಉಳಿದ ಶೌಚಾಲಯಗಳನ್ನು ಆಕರ್ಷಕವಾಗಿ ಅಲಂಕೃತಗೊಳಿಸಿ, ಸಾರ್ವಜನಿಕರ ಬಳಕೆಗೆ ಅವಕಾಶ ಕಲ್ಪಿಸಲಾಗುವುದು ಎಂಬುದಾಗಿ ನ್ಯಾಯಾಧೀಶರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರುಗಳಾದ ಶ್ರೀಮತಿ ಮೀನಾಕ್ಷಿ, ಆರೋಗ್ಯ ನಿರೀಕ್ಷಕ ಅಶೋಕ್, ಅಜಯ್ ಕುಮಾರ್, ಮೋಹನ್, ಸೇರಿದಂತೆ ನಗರಸಭೆ ಸಿಬ್ಬಂದಿವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page